ಕೆಎಲ್ ರಾಹುಲ್‌ಗೆ ಶಸ್ತ್ರಚಿಕಿತ್ಸೆ ; ಪಂತ್ ಪ್ರಾರ್ಥನೆ

Date:

ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಕೆಲವೇ ಗಂಟೆಗಳು ಇರುವಾಗ ತೀವ್ರ ಹೊಟ್ಟೆನೋವಿಗೆ ಒಳಗಾಗಿದ್ದರು. ಹೀಗೆ ತೀವ್ರ ಹೊಟ್ಟೆನೋವಿಗೆ ಒಳಗಾದ ಕೆ ಎಲ್ ರಾಹುಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಅಪೆಂಡಿಸಿಟಿಸ್ ಇರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಲಾಗಿತ್ತು.

ಕೆ ಎಲ್ ರಾಹುಲ್ ಅವರಿಗೆ ಸೋಮವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಕೆಎಲ್ ರಾಹುಲ್ ಅವರಿಗೆ ಒಂದು ವಾರದ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ. ಸದ್ಯ ಕೆಎಲ್ ರಾಹುಲ್ ಚೇತರಿಸಿಕೊಳ್ಳುತ್ತಿದ್ದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.

 

 

ಇದೀಗ ಕೆಎಲ್ ರಾಹುಲ್ ಅವರ ಆರೋಗ್ಯದ ಕುರಿತು ರಿಷಭ್ ಪಂತ್ ಟ್ವಿಟ್ಟರ್ ಮೂಲಕ ಪ್ರಾರ್ಥಿಸಿಕೊಂಡಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬನ್ನಿ, ನೀವು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ ಮತ್ತು ಶುಭಹಾರೈಕೆಗಳನ್ನು ಕಳುಹಿಸುತ್ತಿದ್ದೇನೆ ಎಂದು ಕೆ ಎಲ್ ರಾಹುಲ್ ಅವರಿಗೆ ರಿಷಭ್ ಪಂತ್ ಟ್ವೀಟ್ ಮಾಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...