ಕೆಲಸದ ಆಸೆಯಿಂದ ಬಾವಿಗೆ ಬಿದ್ದೀರ ಜೋಕೆ

Date:

ವಿದೇಶದಲ್ಲಿ ಕೆಲಸ ಪಡೆಯುವ ಆಸೆಗೆ ಬಿದ್ದು ಮೋಸ ಹೋಗಬೇಡಿ. ಅಂಗೈಯಲ್ಲಿ ಆಕಾಶ ತೋರಿಸಿ ನಾಮ ಹಾಕುವ ಬೋಗಸ್ ಕಂಪನಿಗಳು ಮೋಸ ಮಾಡಲೆಂದೇ ಹುಟ್ಟಿಕೊಂಡಿವೆ. ವಿದೇಶದಲ್ಲಿ ಕೆಲಸ ಕೊಡಿಸುವ ಆಸೆ ಹುಟ್ಟಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ್ದ ಕಂಪನಿಯೊಂದರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.


ಕೆನಡಾದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವ ಆಸೆ ತೋರಿಸಿ ವಿಆರ್‌ಆರ್ ವೆಂಚರ್ಸ್ ಪ್ರೆ. ಲಿಮಿಟೆಡ್ ನೂರಾರು ನಿರುದ್ಯೋಗಿ ಯುವಕರಿಂದ ಲಕ್ಷಾಂತರ ಹಣ ಪಡೆದು ಮೋಸ ಮಾಡಿದೆ. ಹಣ ಕಳೆದುಕೊಂಡು ಬೀದಿಗೆ ಬಿದ್ದಿರುವ ಯುವಕರು ಕಂಪನಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಕಂಪನಿ ಮುಖ್ಯಸ್ಥರಿಗಾಗಿ ಶೋಧ ನಡೆಸುತ್ತಿದ್ದಾರೆ.
ಕೆನಡಾದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ವಿಆರ್ಆರ್ ವೆಂಚರ್ಸ್ ಜಾಹೀರಾತು ನೀಡಿತ್ತು. ಇದನ್ನು ನಂಬಿ ನೂರಾರು ಯುವಕರು ಸಂದರ್ಶನಕ್ಕೆ ಬಂದಿದ್ದರು.

ಕೆನಡಾದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಸಿಕ್ಕಿರುವ ಬಗ್ಗೆ ನಕಲಿ ಲೆಟರ್ ಹೆಡ್ ಗಳಲ್ಲಿ ನೇಮಕಾತಿ ಆದೇಶ ವಿಆರ್‌ಆರ್ ವೆಂಚರ್ಸ್ ನೀಡಿರುವುದು ನಕಲಿ ನೇಮಕಾತಿ ಪತ್ರಗಳು ಎಂಬುದು ಗೊತ್ತಾಗಿದೆ. ಆ ಬಳಿಕ ಕಂಪನಿಯ ಕಚೇರಿಗೆ ಹೋಗಿ ಹಣ ವಾಪಸು ನೀಡುವಂತೆ ಕೇಳಿದ್ದಾರೆ. ಇದಕ್ಕೆ ಯಾವುದೇ ಉತ್ತರ ನಿಡದೇ ಬೆದರಿಕೆ ಹಾಕಿದ್ದಾರೆ. ಇದರಿಂದ ನೊಂದ ಯುವಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ದೇಶ- ವಿದೇಶದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಹುಟ್ಟಿಕೊಂಡಿರುವ ಅನೇಕ ಕನ್ಸಲ್ಟೆನ್ಸಿ ಏಜೆನ್ಸಿಗಳು ಜನರಿಂದ ನೋಂದಣಿ ಶುಲ್ಕ, ನೇಮಕಾತಿ ಶುಲ್ಕ ಹೆಸರಿನಲ್ಲಿ ವಸೂಲಿ ಮಾಡುವ ಜಾಲ ಬೆಂಗಳೂರಿನಲ್ಲಿ ಮೊದಿನಿಂದಲೂ ನಡೆದುಕೊಂಡು ಬರೆತ್ತಿದೆ. ಇದೀಗ ವಿದೇಶದಲ್ಲಿ ಕೆಲಸ ಕೊಡಿಸುವ ಆಸೆ ಹುಟ್ಟಿಸಿ ಅಮಾಯಕ ಯುವಕರಿಗೆ ಕೆಲಸದ ಆಮಿಷ ತೋರಿಸಿ ಪ್ರತಿಷ್ಠಿತ ಕಂಪನಿಗಳ ಸೋಗಿನಲ್ಲಿ ಬೀದಿಗೆ ತಳ್ಳುತ್ತಿವೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...