No menu items!
12 C
Munich
Wednesday, May 6, 2026

ಕೆಲಸದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಕಂಡಕ್ಟರ್

Must read

ಬಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಕೆಎಸ್‌ಆರ್ ಟಿಸಿ ಬಸ್ ನಿರ್ವಾಹಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಇವರು ಕೆಲಸ ನಿರ್ವಹಿಸುತ್ತಿದ್ದ ಬಸ್ ಚಿಕ್ಕಮಗಳೂರು ನಗರ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ಉಡುಪಿಗೆ ಹೊರಟಿತ್ತು. ಕೊಟ್ಟಿಗೆಹಾರ ಬಳಿ ಸಾಗುವಾಗ ನಿರ್ವಾಹಕ ವಿಜಯ ಕುಮಾರ್ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಚಾಲಕ ಮತ್ತು ಕೊಟ್ಟಿಗೆಹಾರ ನಿಲ್ದಾಣ ನಿರೀಕ್ಷಕ ಬಣಕಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಅಲ್ಲಿ ಅವರು ಮೃತಪಟ್ಟಿದ್ದಾರೆ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article