ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ!

Date:

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ವಿಧಾನಸಭೆಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಕವನ ವಾಚಿಸುವ ಮೂಲಕ ಮತ್ತೆ ಕನ್ನಡಾಭಿಮಾನ ಮೆರೆದಿದ್ದಾರೆ.

ಕೇರಳ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ‘ಕೇರಳ–ಕರ್ನಾಟಕ ಗಡಿ ಪ್ರದೇಶವಾದ ಮಂಜೇಶ್ವರ ಕ್ಷೇತ್ರದಿಂದ ನಾನು ಆಯ್ಕೆಯಾಗಿ ಇಲ್ಲಿಗೆ ಬಂದಿದ್ದೇನೆ.

ನಮ್ಮದು ವೈವಿಧ್ಯಮಯ ಭಾಷೆ, ಕಲೆ, ಸಂಸ್ಕೃತಿ, ಸಂಸ್ಕಾರದ ನಾಡು. ಕನ್ನಡದ ರಾಷ್ಟ್ರ ಕವಿ ಗೋವಿಂದ ಪೈಯವರಿದ್ದ ನಾಡು ನನ್ನದು. ಗೋವಿಂದ ಪೈಯವರ ಅನೇಕ ಭಾಷೆಗಳಿಗೆ ಅನುವಾದಗೊಂಡಿರುವ ‘ಹೆಬ್ಬೆರಳು’ ಎಂಬ ನಾಟಕದಲ್ಲಿ ಬರುವ ಕವಿತೆಯೊಂದನ್ನು ನಾನಿಲ್ಲಿ ವಾಚಿಸುತ್ತೇನೆ’ ಎಂದು ಅದನ್ನು ವಾಚಿಸಿದ್ದಾರೆ. ಅಲ್ಲದೆ ಆ ಕವಿತೆ ಸಾರಾಂಶವನ್ನು ವಿವರಿಸಿದ್ದಾರೆ.

https://www.facebook.com/110515719288912/posts/1460637424276728/

 

https://www.facebook.com/110515719288912/posts/1460637424276728/

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...