ಕೊಟ್ಟೂರು ಗುರುಬಸವೇಶ್ವರ ತೇರಿನ ಸ್ಟೇರಿಂಗ್ ಕಟ್: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಭಕ್ತರು ಪಾರು!

Date:

ಕೊಟ್ಟೂರು ಗುರುಬಸವೇಶ್ವರ ತೇರಿನ ಸ್ಟೇರಿಂಗ್ ಕಟ್: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಭಕ್ತರು ಪಾರು!

ಬಳ್ಳಾರಿ:- ಕೊಟ್ಟೂರು ಗುರುಬಸವೇಶ್ವರ ತೇರಿನ ಸ್ಟೇರಿಂಗ್ ಕಟ್ ಆದ ಹಿನ್ನೆಲೆ ಕೂದಲೆಳೆ ಅಂತರದಲ್ಲಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ಜರುಗಿದೆ.

ನಿನ್ನೆ ಸಂಜೆ ಗುರುಬಸವೇಶ್ವರ ತೇರನ್ನು ಹೊರತೆಗೆಯುವಾಗ ಅದರೊಳಗಿನ ಸ್ಟೇರಿಂಗ್ ಕೈ ಕೊಟ್ಟಿತ್ತು. ಹೀಗಾಗಿ ರಥವನ್ನು ಜೋರಾಗಿ ಎಳೆಯಲಾಗಿದೆ. ಜೋರಾಗಿ ಎಳೆದ ಪರಿಣಾಮ ಬೃಹತ್ ಗಾತ್ರದ ತೇರು ರಭಸವಾಗಿ ಕೆಳಗೆ ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಭಕ್ತರು ಪಕ್ಕಕ್ಕೆ ಸರಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದು, ಭಾರೀ ಅನಾಹುತ ತಪ್ಪಿದೆ.

ರಥದ ಗಾಲಿಗಳ ನಿರ್ವಹಣೆ ಮಾಡುವವರ ಸಮಯ ಪ್ರಜ್ಞೆಯಿಂದ ಜನರನ್ನ ಬದಿಗೆ ಸರಿಸಲು ಕಾರಣವಾಯಿತು. ಆದರೆ ರಸ್ತೆ ಬದಿಗೆ ನಿಂತಿದ್ದ ಸ್ಕೂಟಿ ಹಾಗೂ ಬೈಕ್‌ಗಳು ರಥದಡಿಗೆ ಸಿಲುಕಿ ಅಪ್ಪಚ್ಚಿಯಾಗಿವೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...