No menu items!
3.1 C
Munich
Thursday, April 30, 2026

ಕೊನೆಗಾಲದಲ್ಲಿ ದೇವೇಗೌಡರವರು ಗೆಲ್ಲಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ ಬಿಜೆಪಿ ಅಭ್ಯರ್ಥಿ!

Must read

ಮಾಜಿ ಪ್ರಧಾನಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಿತ್ತು ಹಾಸನದವನಾಗಿ ನನಗೆ ಬೇಸರವಿದೆ ಎಂದು  ಬಿಜೆಪಿ ಅಭ್ಯರ್ಥಿ ಎ ಮಂಜು ಹೇಳಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ತಿಂಗಳು ಕಾದು ನೋಡಿ, ನಾನೇ ಸಂಸಸತ್ತಿಗೆ ಹೋಗುತ್ತೇನೆ. ಕಾನೂನು ಹೋರಾಟ ಮುಂದುವರೆಯುತ್ತದೆ. ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ, ಸೋಲಿನಿಂದ ಧೃತಿಗೆಟ್ಟಿಲ್ಲ. ನಾನು ಚುನಾವಣೆಯಲ್ಲಿ ಸೋತಿದ್ದಕ್ಕೆ ಬೇಸರವಿಲ್ಲ ಎಂದರು.

ಮೈತ್ರಿ ಲಾಭವಾಗಿದ್ದು ಕುಟುಂಬಕ್ಕೆ ಮಾತ್ರ. ಈಗಲಾದರೂ ನಮ್ಮ ನಾಯಕ ಸಿದ್ದರಾಮಯ್ಯ ಎಚ್ಚೆತ್ತುಕೊಳ್ಳಲಿ. ವಿಶ್ವನಾಥ್ ರಾಜೀನಾಮೆ ಕೊಟ್ಟು ಒಳ್ಳೆ ಕೆಲಸ ಮಾಡಿದ್ದಾರೆ.ಸರ್ಕಾರ ಏನಾಗುತ್ತದೆ ಎಂದು ಕಾದು ನೋಡಬೇಕು ಎಂದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article