ಕೊನೆಗೂ ಸಾರಿಗೆ ನೌಕರರ ಮುಷ್ಕರ ಅಂತ್ಯ

Date:

ಸಾರಿಗೆ ಮುಷ್ಕರ ತಾತ್ಕಾಲಿಕ ಅಂತ್ಯ ಕಂಡಿದ್ದು, ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೈಕೋರ್ಟ್‌ ಸೂಚನೆಯಂತೆ ಮುಷ್ಕರ ವಾಪಸ್ ಪಡೆದುಕೊಳ್ಳುತ್ತಿದ್ದೇವೆ ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಘೋಷಿಸಿದ್ದಾರೆ.

ನ್ಯಾಯಮೂರ್ತಿಗಳ ಹೇಳಿಕೆಗೆ ಗೌರವ ಕೊಡುತ್ತೇವೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದಿದ್ದಾರೆ. ಜನರಿಗೆ ತೊಂದರೆ ಕೊಡಬೇಡಿ ಎಂದಿದ್ದಾರೆ. ಹೀಗಾಗಿ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

ಈಗಾಗಲೇ ಸರಕಾರದ ಕ್ರಮಕ್ಕೆ ಬೆದರಿ ಹಾಗೂ ಮುಷ್ಕರದಲ್ಲಿ ಪಾಲ್ಗೊಳ್ಳದ ಹಲವು ಸಾರಿಗೆ ಸಂಸ್ಥೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಹಲವೆಡೆ ಒಂದಿಷ್ಟು ಬಸ್‌ಗಳು ಓಡಾಟ ನಡೆಸುತ್ತಿದ್ದವು. ಇದೀಗ ಮುಷ್ಕರ ವಾಪಸ್‌ ಪಡೆದಿರುವುದರಿಂದ ರಾಜ್ಯದಲ್ಲಿ ಎಂದಿನಂತೆ ಬಸ್‌ ಸಂಚಾರ ಮತ್ತೆ ಆರಂಭವಾಗಲಿದೆ.

ಈಗಾಗಲೇ ಸರಕಾರದ ಕ್ರಮಕ್ಕೆ ಬೆದರಿ ಹಾಗೂ ಮುಷ್ಕರದಲ್ಲಿ ಪಾಲ್ಗೊಳ್ಳದ ಹಲವು ಸಾರಿಗೆ ಸಂಸ್ಥೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಹಲವೆಡೆ ಒಂದಿಷ್ಟು ಬಸ್‌ಗಳು ಓಡಾಟ ನಡೆಸುತ್ತಿದ್ದವು. ಇದೀಗ ಮುಷ್ಕರ ವಾಪಸ್‌ ಪಡೆದಿರುವುದರಿಂದ ರಾಜ್ಯದಲ್ಲಿ ಎಂದಿನಂತೆ ಬಸ್‌ ಸಂಚಾರ ಮತ್ತೆ ಆರಂಭವಾಗಲಿದೆ.

ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡಬೇಕು ಎಂಬ ಬೇಡಿಕೆಯೂ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಸಾರಿಗೆ ನಿಗಮಗಳ ನೌಕರರು ಏಪ್ರಿಲ್‌ 7 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆದರೆ ಸರಕಾರ ಬೇಡಿಕೆಗೆ ಮಣಿದಿರಲಿಲ್ಲ. ಇತ್ತ ಪಟ್ಟು ಬಿಡದ ಸಾರಿಗೆ ನೌಕರರು ಮುಷ್ಕರವನ್ನೂ ಕೈಬಿಡದೆ ಸತತ 15 ದಿನಗಳಿಂದ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...