ಕೊರೊನಾ : ಕಾಂಗ್ರೆಸ್‌ನ 100 ಕೋಟಿ ದಾನದ ನಾಟಕ!

Date:

ದೇಶದಾದ್ಯಂತ ಕೊರೋನಾವೈರಸ್ ತನ್ನ ಆರ್ಭಟವನ್ನು ಮುಂದುವರಿಸಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ತನ್ನ ರೌದ್ರ ನರ್ತನವನ್ನು ಮುಂದುವರಿಸಿರುವ ಕೊರೋನಾವೈರಸ್ ದಿನೇ ದಿನೇ ಬಲಿ ಪಡೆಯುತ್ತಿದೆ. ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು ಜನರ ಜೀವ ಉಳಿಸಲು ರಾಜ್ಯ ಸರ್ಕಾರ ಹಲವಾರು ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

 

 

ಇನ್ನು ಕೇಂದ್ರ ಸರ್ಕಾರ ದೇಶದ ಎಲ್ಲಾ ಪ್ರಜೆಗಳಿಗೂ ಸಹ ಕೊರಾನ್ ಲಸಿಕೆ ಒದಗಿಸುವ ಯೋಜನೆಯನ್ನು ಹಾಕಿದ್ದು ನಿಮಗೆಲ್ಲರಿಗೂ ಗೊತ್ತೇ ಇದೆ. ಆದರೆ ಕರ್ನಾಟಕದಲ್ಲಿ ಕೊರೋನಾ ಲಸಿಕೆ ಅಭಾವ ಉಂಟಾಗಿದೆ. ಕೊರೊನಾ ಲಸಿಕೆ ಇಲ್ಲದೇ ಇರುವ ಕಾರಣದಿಂದ ರಾಜ್ಯದ ಯುವ ಪೀಳಿಗೆಗೆ ಸದ್ಯಕ್ಕೆ ಕೊರೊನಾ ಲಸಿಕೆ ನೀಡುವುದಿಲ್ಲ ಮುಂದಿನ ದಿನಗಳಲ್ಲಿ ಲಸಿಕೆಯ ಒದಗಿಸುತ್ತೇವೆ ಎಂದು ರಾಜ್ಯ ಬಿಜೆಪಿ ಸರ್ಕಾರ ಹೇಳಿಕೆ ನೀಡಿದೆ.

 

 

 

ಇಂತಹ ಸಮಯದಲ್ಲಿ ವಿರೋಧ ಪಕ್ಷದ ನಾಯಕರೆಲ್ಲರೂ ಸೇರಿ ಕಾಂಗ್ರೆಸ್ ಸಮಿತಿಯಿಂದ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೂರು ಕೋಟಿ ದೇಣಿಗೆಯನ್ನು ನೀಡುವುದರ ಮೂಲಕ ಕೊರೊನಾ ಲಸಿಕೆ ಖರೀದಿಸಿ ಎಂದು ಮನವಿ ಮಾಡಿದೆ. ಇನ್ನು ಬಿಜೆಪಿ ಸರ್ಕಾರದ ಬಳಿ ಹಣವಿದೆ, ಆದರೆ ಲಸಿಕೆ ಉತ್ಪಾದನೆಯಾಗುತ್ತಿಲ್ಲ ಅಷ್ಟೆ, ಲಸಿಕೆ ಉತ್ಪಾದನೆ ಆಗುತ್ತಿಲ್ಲ ಎಂಬ ಸಮಯವನ್ನು ನೋಡಿ ದಾನದ ನಾಟಕ ಮಾಡಬೇಡಿ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ನಮ್ಮ ಬಳಿ ಹಣವಿದೆ ಲಸಿಕೆ ಉತ್ಪಾದನೆ ಯಾದ ಸಮಯಕ್ಕೆ ಖರೀದಿಸಿ ಜನರಿಗೆ ಲಸಿಕೆ ನೀಡುತ್ತೇವೆ ಲಸಿಕೆ ಎಂಬ ವಿಚಾರ ತಿಳಿದು ನೂರು ಕೋಟಿ ನೀಡುವ ಡ್ರಾಮಾ ಮಾಡಬೇಡಿ ಎಂದು ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...