ಕೊರೊನಾ ಹೆಚ್ಚಳ; ಈ 2 ರಾಜ್ಯಗಳಿಗೆ ಕೇಂದ್ರದ ಸೂಚನೆ

Date:

ಗುರುವಾರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೋಂಕಿತರ ಸಂಪರ್ಕ ಪತ್ತೆ ಕಾರ್ಯ, ಲಸಿಕೆ ಹಾಗೂ ಕೊರೊನಾ ನಿಯಮಗಳ ಮೇಲೆ ಕಣ್ಣಿಡುವ ಮೂಲಕ ಕೊರೊನಾ ಹರಡುವಿಕೆ ತಡೆಯ ಪ್ರಯತ್ನಗಳನ್ನು ತೀವ್ರಗೊಳಿಸಬೇಕು ಎಂದು ಈ ಎರಡೂ ರಾಜ್ಯಗಳಿಗೆ ಸೂಚಿಸಿದೆ.

ಸೋಂಕು ಹೆಚ್ಚಿರುವ ಭೌಗೋಳಿಕ ಪ್ರದೇಶಗಳಲ್ಲಿ ಸಮರ್ಪಕ ಕ್ರಮಗಳನ್ನು ತೆಗದುಕೊಳ್ಳುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ತಿಳಿಸಿದರು.

ಸೋಂಕು ಹೆಚ್ಚಳವನ್ನು ನಿಯಂತ್ರಿಸಲು ಇನ್ನೂ ಹೆಚ್ಚಿನ ಪ್ರಯತ್ನಗಳು ಅಗತ್ಯ ಎಂದಿರುವ ಭಲ್ಲಾ, ಹೆಚ್ಚು ಕೊರೊನಾ ಪ್ರಕರಣಗಳಿರುವ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಕುರಿತು ರಾಜ್ಯ ಸರ್ಕಾರಗಳು ಆಲೋಚಿಸಬೇಕು ಎಂದು ಸಲಹೆ ನೀಡಿದರು.

ಅಗತ್ಯವಿದ್ದಲ್ಲಿ ಹೆಚ್ಚಿನ ಕೊರೊನಾ ಲಸಿಕೆಗಳನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರಗಳಿಗೆ ಹೇಳಿದ್ದು, ರಾಜ್ಯ ಸರ್ಕಾರಗಳು ಲಸಿಕಾ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.

ಲಸಿಕೆ ನೀಡುವ ಜೊತೆಗೆ ಜನರಿಗೆ ಕೊರೊನಾ ಸೂಕ್ತ ನಡವಳಿಕೆಗೆ ಪ್ರೋತ್ಸಾಹ ನೀಡಬೇಕು ಹಾಗೂ ಮುಂಬರುವ ಹಬ್ಬಗಳ ಸಮಯದಲ್ಲಿ ಸಾಮೂಹಿಕವಾಗಿ ಜನರು ಸೇರುವುದನ್ನು ತಪ್ಪಿಸಬೇಕು ಎಂಬುದನ್ನು ಒತ್ತಿಹೇಳಿದರು. ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಖ್ಯ ಕಾರ್ಯದರ್ಶಿಗಳು, ಕೇರಳ ಹಾಗೂ ಮಹಾರಾಷ್ಟ್ರದ ಡಿಜಿಪಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...