ಕೊರೊನಾ 2ನೇ ಅಲೆಯಿಂದ RBIಗೆ ಆದ ನಷ್ಟವೆಷ್ಟು ಗೊತ್ತಾ?

Date:

ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್‌ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.

ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

 

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್‌ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್‌ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ.

ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್‌ಬಿಐ ಹೇಳಿದೆ.
ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್‌ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್‌ಡೌನ್‌ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...