ಕೊಲೆ ಪ್ರಕರಣ: ಕೆಲಸ ಕಳೆದುಕೊಂಡ ಸುಶೀಲ್ ಕುಮಾರ್

Date:

ಮೇ 4ರಂದು ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಖರ್ ಎಂಬ ಕುಸ್ತಿಪಟುವಿನ ಕೊಲೆ ನಡೆದಿತ್ತು. ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತನಾಗಿದ್ದ ರೆಸ್ಲರ್ ಸುಶೀಲ್ ಕುಮಾರ್ ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸುಶೀಲ್ ಕುಮಾರ್ ತಲೆಮರೆಸಿಕೊಂಡಿದ್ದರು. ದಿನದಿಂದ ದಿನಕ್ಕೆ ಜಾಗ ಬದಲಾಯಿಸುತ್ತಾ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ಎರಡು ದಿನಗಳ ಹಿಂದೆಯಷ್ಟೇ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಕುಸ್ತಿಪಟು ಸಾಗರ್ ಧಂಖರ್ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿರುವುದಕ್ಕೆ ದೆಹಲಿ ಪೊಲೀಸರ ಬಳಿ ಸಾಕ್ಷ್ಯಗಳಿವೆ ಎನ್ನಲಾಗುತ್ತಿದ್ದು ಇತ್ತೀಚೆಗಷ್ಟೇ ಕೊಲೆ ನಡೆದ ಸ್ಥಳಕ್ಕೆ ಸುಶೀಲ್ ಕುಮಾರ್‌‌ನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದರು. ಇದಾದ ಬೆನ್ನಲ್ಲೇ ಇದೀಗ ಸುಶೀಲ್ ಕುಮಾರ್ ಪಾಲಿಗೆ ಮತ್ತೊಂದು ಕಹಿ ಸುದ್ದಿ ಎದುರಾಗಿದ್ದು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತಾಗಿದ್ದಾರೆ.

ಹೌದು ಸುಶೀಲ್ ಕುಮಾರ್‌‌ ವಿರುದ್ಧ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣದಿಂದಾಗಿ ಅವರನ್ನು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತುಗೊಳಿಸಿರುವುದಾಗಿ ಉತ್ತರ ರೈಲ್ವೆಯ ಸಿಪಿಆರ್‌ಒ ದೀಪಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...