ಕೊಲ್ಲೂರು ದೇವಿ ಹರಕೆ ತೀರಿಸಿದ ರಿಷಭ್ ಶೆಟ್ಟಿ

Date:

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ಮುಡಿ ತೆಗೆಸಿ ಹರಕೆಯನ್ನು ತೀರಿಸಿದ್ದಾರೆ.

ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು ಇಂದು ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ.

ಅನ್‍ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್ ಎಂಬ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಿಷಬ್ ಪಂಚೆ ಹಾಗೂ ಶಲ್ಯ ಹಾಗೂ ಅವರ ಪತ್ನಿ ನೀಲಿ ಬಣ್ಣದ ಸೀರೆಯುಟ್ಟಿದ್ದಾರೆ. ಮಗ ರನ್ವಿತ್ ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ.

ಏಪ್ರಿಲ್ ತಿಂಗಳಿನಲ್ಲಿ ರಿಷಬ್ ಶೆಟ್ಟಿಯವರು, ತಮ್ಮ ಮಗನ ಹುಟ್ಟುಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಚಂಡಿಕಾಹೋಮ ಮಾಡಿಸುವ ಮೂಲಕ ಆಚರಿಸಿದ್ದರು.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...