ಕೊವಿಡ್ ಲಸಿಕೆಯಿಂದ ಹೃದಯಾಘಾತ ಅಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Date:

ಕೊವಿಡ್ ಲಸಿಕೆಯಿಂದ ಹೃದಯಾಘಾತ ಅಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿದೆ ಎಂಬ ಆರೋಪವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಳ್ಳಿ ಹಾಕಿದ್ದಾರೆ. ತಜ್ಞರ ಸಮಿತಿಯಿಂದ ಸಲ್ಲಿಕವಾದ ವರದಿಯನ್ನು ಪರಿಶೀಲಿಸಿದ ಬಳಿಕ, ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ಹೃದಯಾಘಾತಕ್ಕೆ ಲಸಿಕೆ ನೇರ ಕಾರಣವಲ್ಲ. ಮಧುಮೇಹ, ರಕ್ತದೊತ್ತಡ, ದಪ್ಪತನ ಹಾಗೂ ದೈಹಿಕ ಚಟುವಟಿಕೆ ಕೊರತೆಯಂತಹ ಅಂಶಗಳೇ ಮುಖ್ಯ ಕಾರಣಗಳು” ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ಎಂಆರ್ಎನ್ಎ ಲಸಿಕೆ ಬಗ್ಗೆ ಕೆಲವು ಅನುಮಾನಗಳಿದ್ದರೂ, ಭಾರತದಲ್ಲಿ ಈ ಲಸಿಕೆಯನ್ನು ಬಳಸಿಲ್ಲ. ಈ ಕುರಿತು ವಿಶ್ವ ಮಟ್ಟದಲ್ಲಿ ಅಧ್ಯಯನಗಳಾಗಿದೆ, ಆದರೆ ನಮ್ಮ ದೇಶದಲ್ಲಿ ಹೀಗೇನೂ ದೃಢಪಟ್ಟಿಲ್ಲ ಎಂದರು. ಹೃದಯಾಘಾತದಿಂದ ಉಂಟಾಗುವ ಸಡನ್ ಡೆತ್ ಪ್ರಕರಣಗಳಿಗೆ ಹೆಚ್ಚಿನ ತಪಾಸಣೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ಶಿಕ್ಷಣ ವರ್ಷದಿಂದ ಹೃದಯಾಘಾತ ಕುರಿತ ಪಾಠ್ಯಕ್ರಮವನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುತ್ತದೆ ಎಂದೂ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...