ಕೊವಿಡ್ ವಾರಿಯರ್ ಗಳಿಗೆ ಚೈತನ್ಯ ಕೇಂದ್ರ

Date:

ಕೋವಿಡ್ ಸೋಂಕಿತರ ಸೇವೆಯಲ್ಲಿ‌ ಹಗಲಿರುಳೆನ್ನದೇ‌  ತೊಡಗಿಸಿಕೊಂಡಿರುವ ‘ಕೋವಿಡ್ ವಾರಿಯರ್’ಗಳ ವಿಶ್ವಾಸ ವೃದ್ಧಿಸುವ ಆಶಯದಿಂದ‌ ಬೆಂಗಳೂರಿನ ರಾಜಾಜಿನಗರದಲ್ಲಿ  ಮೊದಲ ಬಾರಿಗೆ  ಅವರ ಸೇವೆಗಾಗಿ  ‘ಚೈತನ್ಯ ಕೇಂದ್ರವನ್ನು ಇಂದಿನಿಂದ‌ ಆರಂಭಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್‌ ಹೇಳಿದ್ದಾರೆ.

 

 

ಇಂದು ಚೈತನ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ದಾದಿಯರಿಗೆ, ವೈದ್ಯರಿಗೆ ಹಾಗೂ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರುಗಳಿಗೆ  ಸ್ವನಿಯಂತ್ರಿತ ಹವಾ (Steam) ಸೌಲಭ್ಯ, ಕಷಾಯ ಸೇವನೆ, ಹಾಗೂ ಕುಡಿಯಲು ಬಿಸಿನೀರನ್ನು ನಿರಂತರವಾಗಿ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಅವರ ಸೇವೆಯನ್ನು ಗೌರವಿಸುವ ಒಂದು ಪ್ರಯತ್ನ ಇದಾಗಿದ್ದು, ಇದರಿಂದ ಸಮಾಜದಲ್ಲಿ ವಿಶ್ವಾಸ ವೃದ್ಧಿಸುವ ಕಾರ್ಯವಾದರೆ ತಮ್ಮ ಶ್ರಮ ಸಾರ್ಥಕ‌ ಎಂದಿದ್ದಾರೆ.

 

 

ಮನೆಮನೆಗೆ ಆಮ್ಲ ಜನಕ: ಆಂಬ್ಯುಲೆನ್ಸ್ ಸೇವೆಯ ಜೊತೆಗೆ ಸುಮಾರು 20 ಆಮ್ಲಜನಕ ಸಿಲಿಂಡರ್ ಗಳ ಮೂಲಕ ಅಗತ್ಯವಿರುವ ವ್ಯಕ್ತಿಗಳಿಗೆ ಮನೆಗಳಿಗೆ ಆಮ್ಲಜನಕ ಪೂರೈಸುವ ಕಾರ್ಯ ಕೂಡಾ‌ ಇಂದು ಪ್ರಾರಂಭವಾಗಿದೆ. ಭಾಷ್ಯಂ ವೃತ್ತದ ಬಳಿಯಿರುವ ಡಾಕ್ಟರ್ ನಾಗರಾಜ ಆಸ್ಪತ್ರೆಯಲ್ಲಿ 20 ಆಮ್ಲಜನಕ ಪೂರೈಕೆಯುಳ್ಳ ಬೆಡ್ ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಈ ಕೇಂದ್ರದ ಕಾರ್ಯಾರಂಭವಾಗಲಿದೆ ಎಂದು ಸಚಿವರು‌ ಹೇಳಿದ್ದಾರೆ.

 

 

ಉಚಿತ ಆಂಬ್ಯುಲೆನ್ಸ್:  ಇದೇ ಸಂದರ್ಭದಲ್ಲಿ ರಾಜಾಜಿನಗರ ಬಿಜೆಪಿ ಘಟಕದ ವತಿಯಿಂದ ಇಂದು ಉಚಿತ ಆಂಬುಲೆನ್ಸ್ ಸೇವೆ ಪ್ರಾರಂಭ ಮಾಡಲಾಯಿತು. ಆಮ್ಲಜನಕ ವ್ಯವಸ್ಥೆಯೂ ಇರುವ ಈ ಆಂಬುಲೆನ್ಸ್ ಅಗತ್ಯವಿರುವವರಿಗೆ ಶೀಘ್ರ ಆಸ್ಪತ್ರೆಗೆ ಸೇರಿಸಲು ಸಹಾಯವಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...