ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ.
ಈಗಾಗಲೇ ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
1 ರಿಂದ 9ನೇ ತರಗತಿ ಬಂದ್ ಆಗಿರುವುದರಿಂದ ಮಕ್ಕಳಿಗೆ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಚಂದನವಾಹಿನಿಯಲ್ಲಿ ನಾಳೆಯಿಂದ ವಿಡಿಯೋ ಪಾಠ ಪ್ರಸಾರ ಮಾಡಲಾಗುತ್ತದೆ.
ಇನ್ನು ಇಡೀ ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡುವ ಬದಲು ಆಯಾ ಜಿಲ್ಲೆಗಳಲ್ಲಿನ ಕೊರೋನಾ ಪರಿಸ್ಥಿತಿ ಆಧರಿಸಿ ಆಯಾ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡುವ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ತೀರ್ಮಾನ ಕೈಗೊಳ್ಳಲು ಅಧಿಕಾರ ನೀಡಲಾಗಿದೆ.