ಕೊಹ್ಲಿ ಮಾಡಿದ ಆ ಒಂದು ತಪ್ಪಿಗೆ ಆಟಗಾರರೆಲ್ಲಾ ತಲೆತಗ್ಗಿಸಿದ್ರು..!

Date:

ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಮೊದಲ ಎರಡೂ ಮ್ಯಾಚುಗಳಲ್ಲೂ ವಿರಾಟ್ ಕೊಹ್ಲಿ ಪಡೆ ಗೆದ್ದು ಬೀಗಿದೆ. ಇನ್ನು ಬಾಕಿ ಉಳಿದಿರುವ ಮೂರು ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದರೆ ಸರಣಿ ಗೆದ್ದಂತಾಗುತ್ತದೆ. ಈಗ ಎರಡು ಪಂದ್ಯಗಳಲ್ಲಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಕನ್ನಡಿಗ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್. ಮೊದಲ ಪಂದ್ಯದಲ್ಲಿ ಅಯ್ಯರ್ ಪಂದ್ಯಶ್ರೇಷ್ಠರಾದರೆ, ಎರಡನೇ ಪಂದ್ಯದಲ್ಲಿ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ರಾಹುಲ್ ಸತತ ಎರಡು ಮ್ಯಾಚ್​ಗಳಲ್ಲೂ ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. ಟೀಮ್ ಇಂಡಿಯಾ ಮಾಜಿ ನಾಯಕ ಧೋನಿ ಕೂಡ ಟಿ20ಯಲ್ಲಿ ಸತತ ಎರಡು ಹಾಫ್ ಸೆಂಚುರಿ ಬಾರಿಸಿಲ್ಲ. ರಾಹುಲ್ ಆ ಸಾಧನೆ ಮಾಡಿದ್ದಾರೆ.
ಈ ಎಲ್ಲಾ ದಾಖಲೆಗಳು ಗೆಲುವಿನ ನಡುವೆ ನಾಯಕ ವಿರಾಟ್ ಕೊಹ್ಲಿ ಮಾಡಿದ ಒಂದು ತಪ್ಪಿಗೆ ಎಲ್ಲಾ ಸಹ ಆಟಗಾರರು ತಲೆ ತಗ್ಗಿಸಿದ್ದಾರೆ. ಹೌದು, ವಿರಾಟ್ ಕೊಹ್ಲಿ ವಿಶ್ವದ ಶ್ರೇಷ್ಠ ಫೀಲ್ಡರ್​ಗಳಲ್ಲಿ ಒಬ್ಬರು. ಅಂಥಾ ಕೊಹ್ಲಿ ನಿನ್ನೆಯ ಪಂದ್ಯದಲ್ಲಿ ಸುಲಭದ ಕ್ಯಾಚ್ ಕೈ ಚೆಲ್ಲಿದರು. 18ನೇ ಓವರ್​ನಲ್ಲಿ ಜಸ್ಪ್ರೀತ್ ಬುಮ್ರಾರ 3ನೇ ಬಾಲ್​ನಲ್ಲಿ ಸಿಕ್ಸ್​ ಬಾರಿಸಲು ರಾಸ್ ಟೇಲರ್ ಮುಂದಾಗಿದ್ರು. ಆದರೆ ಅದು ವಿರಾಟ್ ಕೊಹ್ಲಿಯತ್ತ ಚಿಮ್ಮಿತು. ಆಗ ವಿರಾಟ್ ಅದನ್ನು ಸುಲಭವಾಗಿ ಹಿಡಿಯುತ್ತಾರೆಂದು ಎಲ್ಲರೂ ಅಂದುಕೊಂಡಿದ್ದರು. ಆದ್ರೆ, ವಿರಾಟ್ ಕ್ಯಾಚ್ ಕೈಚೆಲ್ಲಿದರು ಆಗ ಎಲ್ಲರ ತಲೆ ತಗ್ಗಿಸಿ, ಬೇಸರ ಪಟ್ಟರು. ಕೊಹ್ಲಿ ಆ ಕ್ಯಾಚ್ ಪಡೆದಿದ್ದರೆ ನ್ಯೂಜಿಲೆಂಡ್ 132ರನ್​ ಕೂಡ ಮಾಡ್ತಿರ್ಲಿಲ್ಲ.

https://twitter.com/barainishant/status/1221351491312799746?s=19

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...