ಕೋಟ್ಯಧಿಪತಿಯಲ್ಲಿ ಗೆದ್ದ ಹಣದಲ್ಲಿ ಶಾಲಾ ಕಾಪೌಂಡ್ ನಿರ್ಮಾಣಕ್ಕೆ ಮುಂದಾದ ಪೋರ!

Date:

ಹಾಸನ : ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ, ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಡೆಸಿಕೊಡೋ ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಕೋಟ್ಯಧಿಪತಿಯಲ್ಲಿ ಗೆದ್ದ ಹಣವನ್ನು ಬಾಲಕ ತನ್ನ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಮುಕ್ತ ಮನಸ್ಸಿಂದ ನೀಡಿ ರಿಯಲ್ ಹೀರೋ ಆಗಿದ್ದಾನೆ.
ಆತ ಮೈಸೂರು ಜಿಲ್ಲೆಯ ಕೆಡಗ ಗ್ರಾಮದ ತೇಜಸ್. ಈತ ಹಾಸನದ ಕಟ್ಟಾಯ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.
ಕನ್ನಡದ ಕೋಟ್ಯಧಿಪತಿಯಲ್ಲಿ 6, 40,000 ರೂ ಗೆದ್ದು, ಪೋಷಕರ, ಶಾಲೆಯ, ಶಿಕ್ಷಕರ, ಊರಿನ ಕೀರ್ತಿ ಬೆಳಗಿದ್ದಾನೆ. ಗೆಲುವಿಗಿಂತ ಮಿಗಿಲಾಗಿ ಗೆದ್ದ ಹಣದ ಪಾಲನ್ನು ಶಾಲಾ ಕಾರ್ಯಕ್ಕೆ ನೀಡಿ ಮಾದರಿಯಾಗಿದ್ದಾನೆ.


ಈ ಬಗ್ಗೆ, ಹಣ ಗೆದ್ದಿದ್ದಕ್ಕಿಂತ, ಹಾಟ್ ಸೀಟಲ್ಲಿ ಕೂತು ಆಟವಾಡಿದ್ದು ಖುಷಿಯಾಗಿದೆ. ಪುನೀತ್ ರಾಜ್‌ಕುಮಾರ್ ಜೊತೆ ಕುಳಿತಿದ್ದು ಹೆಮ್ಮೆ ಎಂದು ತೇಜಸ್ ಸಂತಸ ಹಂಚಿಕೊAಡಿದ್ದಾನೆ. ಮುಖ್ಯೋಪಾಧ್ಯಯ ಶೇಖರ್ ಸೇರಿದಂತೆ ತನ್ನ ಗುರುಗಳು, ಪೋಷಕರು ನೀಡಿದ ಸಹಕಾರವನ್ನು ಸ್ಮರಿಸಿದ್ದಾನೆ. ಅಮ್ಮ ಅಪ್ಪಗೆ ನಾನು ಹಣ ಗೆದ್ದಿರೋದು ಖುಷಿಕೊಟ್ಟಿದೆ. ಆದರೆ, ಹಣ ಗೆದ್ದೆನ್ನೆಂದು ಗರ್ವ ಪಡಬೇಡ. ಚೆನ್ನಾಗಿ ಓದುವ ಕಡೆಯೂ ಗಮನ ಕೊಡು ಎಂದಿದ್ದಾರೆ ಎಂದು ವಿನಮ್ರತೆಯಿಂದ ಹೇಳಿಕೊಳ್ಳುತ್ತಾನೆ.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...