ಕೋಲಾರದಲ್ಲಿ ಭೀಕರ ಕೊಲೆ ಪ್ರಕರಣ: ತನಿಖೆ ವೇಳೆ ಹಂತಕರ ಹಲವು ವಿಕೃತ ಕೆಲಸಗಳು ಬೆಳಕಿಗೆ

Date:

ಕೋಲಾರ: ಭೀಕರವಾಗಿ ಕೊಲೆಯಾಗಿದ್ದ ಬಾಲಕ ಕಾರ್ತಿಕ್ ಸಿಂಗ್ ಪ್ರಕರಣದ ತನಿಖೆ ಮುಂದುವರೆದಿದೆ. ತನಿಖೆ ವೇಳೆ ಹಂತಕರ ಹಲವು ವಿಕೃತ ಕೆಲಸಗಳು ಬೆಳಕಿಗೆ ಬಂದಿವೆ. ಬಾಲಕ ಕಾರ್ತಿಕ್ ದೇಹಕ್ಕೆ ಬರ್ಬರವಾಗಿ ಇರಿದ ಹಂತಕರು, ಆತ ನೋವಿನಿಂದ ನರಳುತ್ತಾ ಇರುವ ದೃಶ್ಯವನ್ನು ವಿಡಿಯೋ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ, ಬಾಲಕನ ಮೃತ ದೇಹದ ಮೇಲೆ ‘S’ ಮತ್ತು ‘R’ ಅಕ್ಷರಗಳನ್ನು ಚಾಕುವಿನಿಂದ ಬರೆದು ವಿಕೃತಿ ಮೆರೆದಿದ್ದರು. ಇನ್ನು 6 ಮಂದಿ ಹಂತಕರ ಪೈಕಿ ಮೂವರನ್ನು ಬಂಧಿಸಲಾಗಿದೆ. ಬಾಲಕ ಕಾರ್ತಿಕ್ ಸಿಂಗ್ ಕೊಲೆ ನಂತರವೂ ಹಂತಕರು ಪೈಶಾಚಿಕ ಕೃತ್ಯ ನಡೆಸಿದ್ದಾರೆ. ಕಾರ್ತಿಕ್ ಸಿಂಗ್ ಕೊಲೆಗೈದು ದೇಹದ ಮೇಲೆ S ಹಾಗೂ R ಎಂದು ಬರೆದು ವಿಕೃತಿ ಮೆರೆದಿದ್ದು ತನಿಖೆ ವೇಳೆ ಬಯಲಾಗಿದೆ.
ಕಾರ್ತಿಕ್ ಸಿಂಗ್ ಮುಖ, ಕತ್ತು, ಎದೆ ಭಾಗದ ಮೇಲೆ S ಎಂದು ಹಂತಕರು ಚಾಕುವಿನಲ್ಲೇ ಬರೆದಿದ್ದಾರೆ. ಇನ್ನು ಆತನ ಎದೆಯ ಮೇಲೆ ಒಂದು ಬಾರಿ R ಎಂದು ಬರೆಯಲಾಗಿದೆ. ಕಾರ್ತಿಕ್ ಸಿಂಗ್ ಸಾವನ್ನಪ್ಪಿದ ನಂತರ, ಪದಗಳನ್ನು ಬರೆದಿರುವ ಮಾಹಿತಿ ಸಿಕ್ಕಿದೆ. ಅಂದಹಾಗೆ ಕೊಲೆಯ ಪ್ರಮುಖ ಆರೋಪಿಗಳಾದ ದಿಲೀಪ್ @ ಶೈನು ಹಾಗೂ ರಿಷಿಕ್ ಎನ್ನುವರ ಹೆಸರಿನ ಮೊದಲ ಅಕ್ಷರಗಳನ್ನ ಬರೆದಿರುವ ಶಂಕೆ ಇದೆ.ಕಾರ್ತಿಕ್ ಸಿಂಗ್ ಕೊಲೆ ಮಾಡಿದ ಬಳಿಕ ಅವರವರ ಮನೆಯಲ್ಲಿ ಊಟ ಮಾಡಿ, ಬಳಿಕ 7 ಮಂದಿ ಆರೋಪಿಗಳೂ ಪರಾರಿಯಾಗಿದ್ದರು. ಈ ಕೇಸ್ಗೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಇಬ್ಬರು ಆರೋಪಿಗಳನ್ನ ಬಂಧಿಸಿ, 7 ಮಂದಿಯನ್ನ ವಶಕ್ಕೆ ಪಡೆದು ಕೋಲಾರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...