No menu items!
12.1 C
Munich
Wednesday, May 20, 2026

ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧೆ.!

Must read

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಏಪ್ರಿಲ್‌ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಬಹುತೇಕ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಇದರ ಬೆನ್ನಲ್ಲೇ ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ರಾಜ್ಯ ಚುನಾವಣೆ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದೇವೆ ಎಂದು ಬಿಜೆಪಿಯ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಅವರು ಹೇಳಿದ್ದಾರೆ.
ಕೋಲಾರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಅಭ್ಯರ್ಥಿ ಯಾರೆಂಬುದು ಮುಖ್ಯವಲ್ಲ. ಕಾರ್ಯಕರ್ತರೆಲ್ಲ ಒಟ್ಟಾಗಿ ಪೂರ್ತಿ ಶ್ರದ್ಧೆಯನ್ನಿಟ್ಟು ಮನಪೂರ್ವಕವಾಗಿ ಕೆಲಸ ಮಾಡಬೇಕು. 25 ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಎಲ್ಲಿಯು ಕೂಡ ಹಸ್ತಕ್ಷೇಪ ಮಾಡಿಲ್ಲ. ಹೀಗಾಗಿ ಅವರು ಕೇಳಿದ 3 ಕ್ಷೇತ್ರಗಳನ್ನು ಬಿಟ್ಟು ಕೊಟ್ಟಿದ್ದೇವೆ ಎಂದು ರಾಧಾ ಮೋಹನ್ ದಾಸ್ ಅವರು ಕಾರ್ಯಾಗಾರದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article