No menu items!
20.3 C
Munich
Monday, June 15, 2026

ಕೋವಿಡ್ 2 ನೇ ಅಲೆ ಮುಗಿದರೂ ಕಾಂಗ್ರೆಸ್ ಗೆ ಅಧ್ಯಕ್ಷ ಸಿಗ್ಲಿಲ್ಲ : ತೇಜಸ್ವಿ ಸೂರ್ಯ

Must read

ಕೋವಿಡ್ ಎರಡನೇ ಅಲೆ ಮುಗಿದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ! ಎಂದು ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷತೆಗೆ ರಾಜೀನಾಮೆ ಕೊಟ್ಟರು. ಕೊರೊನಾ ಎರಡು ಅಲೆಗಳು ಬಂದು ಹೋಗಿವೆ. ಮೂರನೇ ಅಲೆ ಬರುವಂತಿದೆ. ಆದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ ಎಂದರು.


ಇನ್ನು ರಾಜ್ಯದ ಯುವ ಕಾಂಗ್ರೆಸ್‍ನಲ್ಲೂ ಸಮಸ್ಯೆ ಮುಂದುವರಿದಿದೆ. ಗೆದ್ದವರು ಒಬ್ಬರು, ಇನ್ನೊಬ್ಬರಿಗೆ ಅಧ್ಯಕ್ಷತೆ, ಅದರಲ್ಲೂ ಗುಂಪುಗಾರಿಕೆ ಹಾಗೂ ಹೊಡೆದಾಟ ಮುಂದುವರಿದಿದೆ ಎಂದು ವಿವರಿಸಿದರು. ಯುವ ಮೋರ್ಚಾವು ನಿರಂತರವಾಗಿ ಅನೇಕ ನಾಯಕರನ್ನು ಪಕ್ಷಕ್ಕೆ ನೀಡಿದೆ. ಅದನ್ನು ಸ್ಫೂರ್ತಿಯ ವಿಷಯವನ್ನಾಗಿ ಯುವ ಮೋರ್ಚಾದ ಪದಾಧಿಕಾರಿಗಳು ಮಾಡಿಕೊಂಡು ಬೆಳೆಯಬೇಕು ಎಂದು ಆಶಿಸಿದರು.


ಯುವ ಮೋರ್ಚಾವು ಮಾದರಿ ಸಂಘಟನೆ. ಅದು ಎಲ್ಲ ರೀತಿಯ ಯುವಕರನ್ನು ಪ್ರತಿನಿಧಿಸುವ ಸಂಘಟನೆಯಾಗಿ ಬೆಳೆಯಬೇಕು. ಯುವ ಮೋರ್ಚಾವು ರಾಜಕೀಯದಲ್ಲಿ ಹೊಸ ಪ್ರಯತ್ನ ಅಳವಡಿಸಿಕೊಳ್ಳುವಂತಾಗಬೇಕು. ಮೂಲ ತತ್ವ, ಸಿದ್ಧಾಂತಗಳಲ್ಲಿ ಸ್ಥಿರತೆ ಮತ್ತು ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಬದಲಾವಣೆ ನಮ್ಮದಾಗಿರಬೇಕು ಎಂದು ಅವರು ತಿಳಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article