No menu items!
14.4 C
Munich
Sunday, May 3, 2026

ಕೌಟುಂಬಿಕ ಕಲಹ ಹಿನ್ನಲೆ: ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ!

Must read

ಕೌಟುಂಬಿಕ ಕಲಹ ಹಿನ್ನಲೆ: ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ!

ಹಾಸನ: ಕೌಟುಂಬಿಕ ಕಲಹ ಹಿನ್ನಲೆ ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗನಾಗಿದ್ದು,
ಕಳೆದ ಎಂಟು ತಿಂಗಳ ಹಿಂದೆಯಷ್ಟೆ ಭರತ್ ಅರಸೀಕೆರೆ ತಾಲ್ಲೂಕು, ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿದ್ದನು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.
ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -spot_img

More articles

- Advertisement -spot_img

Latest article