ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರಿಂದ ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ

0
73

ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಿ ನಿಧಿ ಅರ್ಪಣೆ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ರಾಜ್ಯ ಬಿಜೆಪಿ ಸಹ ವಕ್ತಾರೆ ಮಾಳವಿಕಾ ಅವಿನಾಶ್ ಅವರು ಖ್ಯಾತ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್, ಸುನಿಲ್ ಜೋಶಿ, ವಿಜಯ ಭಾರದ್ವಾಜ್ ಹಾಗೂ ರಣಜಿ ಆಟಗಾರ ಅಖಿಲ್ ಅವರನ್ನು ಭೇಟಿಯಾಗಿ ನಿಧಿ ಸಂಗ್ರಹಿಸಿದರು.


ಈ ಸಮಯದಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ತುಂಬಾ ಖುಷಿ ವ್ಯಕ್ತಪಡಿಸಿ ನಾನು ಈ ಅಭಿಯಾನಕ್ಕೆ ಜೋಡಿಸಿಕೊಳ್ಳುತ್ತೇನೆ ಎಂದರು. ರಾಮ ಮಂದಿರ ನಿರ್ಮಾಣ ದೇಶದ ನಿರ್ಮಾಣ ಅಂತ ಹೇಳಿದರು.

LEAVE A REPLY

Please enter your comment!
Please enter your name here