‘ವಿವಿಧ ಸಮಾಜಗಳ ಒತ್ತಡ ಸರಕಾರದ ಮೇಲೆ ನಿರಂತರವಾಗಿ ಇರುತ್ತದೆ. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಹೇಳಿಕೆ ಸಹಜ ಪ್ರಕ್ರಿಯೆ. ಇದರ ಬಗ್ಗೆ ಚರ್ಚೆ ಅನಾವಶ್ಯಕ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.
ಎಲ್ಲರೂ ನಮ್ಮವರೇ ಬೈದವರೆನ್ನ ಬಂಧುಗಳು ಎಂಬ ಬಸವಣ್ಣನವರ ಉಕ್ತಿಯಲ್ಲಿ ನಂಬಿಕೆ ಇಟ್ಟವನು. ಅಂದು ನಾನು ಆಡಿದ ಮಾತುಗಳಿಂದ ಯಾರಿಗಾದರು ಬೇಸರವಾದರೆ ಕ್ಷಮೆ ಇರಲಿ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.