ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ?: ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

Date:

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ?: ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ,
ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಶಂಕೆ ವ್ಯಕ್ತಪಡಿಸಿರುವ ಅವರು; ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು (!?) ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ!! ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಅವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...