ಗಣಪತಿ ಚತುರ್ಥಿಗೆ ಸದ್ದಿಲ್ಲದೆ ಸರ್​ಪ್ರೈಸ್ ಗಿಫ್ಟ್ ಕೊಟ್ಟ ಒಡೆಯ ದರ್ಶನ್..!

Date:

ನಾಡಿನೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಹಬ್ಬ ಹರಿದಿನಗಳ ಸಂಭ್ರಮಗಳನ್ನು ಸಿನಿಮಾಗಳು ಕೂಡ ಹೆಚ್ಚಿಸುತ್ತವೆ. ಸಿನಿಮಾ ತಂಡಗಳು ಪೋಸ್ಟರ್, ಟೀಸರ್, ಟ್ರೇಲರ್, ಸಿನಿಮಾ ಹೆಸರು ಅನೌನ್ಸ್, ಸಿನಿಮಾ ರಿಲೀಸ್ ಹೀಗೆ ನಾನಾ ರೀತಿಯಲ್ಲಿ ಹಬ್ಬಕ್ಕೆ ಅಭಿಮಾನಿಗಳಿಗೆ ಉಡುಗೊರೆ ಕೊಡುತ್ತವೆ.
ಅದರಲ್ಲೂ ಸ್ಟಾರ್​​ ನಟರ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ಇನ್ನಿಲ್ಲದ ಕುತೂಹಲ, ನಿರೀಕ್ಷೆಗಳು ಇರುತ್ತವೆ. ಅಂತೆಯೇ ಸ್ಟಾರ್ ನಟರು ಸಹ ಒಂದಲ್ಲ ಒಂದು ಸರ್​ಪ್ರೈಸ್ ಕೊಡುತ್ತಿರುತ್ತಾರೆ. ಈ ವರ್ಷದ ಆರಂಭದಿಂದಲೂ ಅಭಿಮಾನಿಗಳಿಗೆ ಒಂದರ ಹಿಂದೆ ಒಂದು ಗಿಫ್ಟ್ ಕೊಡುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್​ ದರ್ಶನ್ ಗಣೇಶ ಹಬ್ಬಕ್ಕೂ ಉಡುಗೊರೆ ನೀಡಿದ್ದಾರೆ.
ವರ್ಷದ ಆರಂಭದಲ್ಲಿ ಯಜಮಾನ ಸಿನಿಮಾ ರಿಲೀಸ್ ಆಗಿತ್ತು. ನಂತರ ಕುರುಕ್ಷೇತ್ರ ಟ್ರೇಲರ್, ಸಾಂಗ್​ಗಳಿಂದ ಅಬ್ಬರಿಸಿತ್ತು. ಇದೀಗ ಆ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಗಣೇಶ ಹಬ್ಬಕ್ಕೆ ದರ್ಶನ್ ಒಡೆಯನಾಗಿ ಬಂದಿದ್ದಾರೆ. ತಮಿಳಿನ ವೀರಂ ಸಿನಿಮಾ ಕನ್ನಡ ರಿಮೇಕ್ ಆಗಿರುವ ಒಡೆಯ ಸಿನಿಮಾವನ್ನು ಎಂ.ಡಿ ಶ್ರೀಧರ್ ನಿರ್ದೇಶಿಸಿದ್ದಾರೆ. ದರ್ಶನ್ ಅವರ ಬುಲ್ ಬುಲ್ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ಶ್ರೀಧರ್ ಈಗ ‘ಒಡೆಯ’ ನ ದರ್ಶನ ಮಾಡಿಸುತ್ತಿದ್ದಾರೆ.
ಗಣೇಶ ಹಬ್ಬದ ಪ್ರಯುಕ್ತ ಒಡೆಯ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಒಡೆಯನ ದರ್ಶನ ಪಡೆದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹರಿದಾಡುತ್ತಿದೆ. ದರ್ಶನ್ ಅಭಿಮಾನಿಗಳ ವಾಟ್ಸ್​ ಆ್ಯಪ್ ಸ್ಟೇಟಸ್ ತುಂಬೆಲ್ಲಾ ಒಡೆಯನ್ನದೇ ಹವಾ..!

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...