ಗದಗ ಕಟೌಟ್ ದುರಂತ: ಗಾಯಾಳುಗಳಿಗೆ ಪರಿಹಾರ ನೀಡಿದ ಯಶ್

By
1 Min Read

ಕಟೌಟ್ ಕಟ್ಟಲು ಹೋಗಿ ಕರೆಂಟ್ ದುರಂತದಿಂದ ಮೂವರು ಮೃತಪಟ್ಟಿದ್ದರು. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಯಶ್ ಮೃತ ಯುವಕರ ಕುಟುಂಬಕ್ಕೆ ಭೇಟಿಯಾಗಿ ಪರಿಹಾರ ಧನ ನೀಡಿದ್ದರು. ಚಿಕಿತ್ಸೆಯಲ್ಲಿದ್ದ ಗಾಯಾಳುಗಳಿಗೆ ಪರಿಹಾರ ನೀಡುವುದಾಗಿ ಯಶ್ ಭರವಸೆ ನೀಡಿ, ಯೋಗಕ್ಷೇಮ ವಿಚಾರಿಸಿದ್ದರು. ಇದೀಗ ಯಶ್ ನುಡಿದಂತೆ ನಡೆದುಕೊಂಡಿದ್ದಾರೆ. ಗಾಯಾಳುಗಳ ಕುಟುಂಬಕ್ಕೆ ನೇರವಾಗಿ 1 ಲಕ್ಷ ರೂ. ಅವರ ಖಾತೆಗೆ ವರ್ಗಾಯಿಸಿದ್ದಾರೆ.
ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಯುವಕರು ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂಬುವವರು ನಿಧನರಾಗಿದ್ದು, ಇನ್ನೂಳಿದ ಮೂವರಿಗೆ ಗಂಭೀರ ಗಾಯಗಳಾಗಿದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈಗ ಉಳಿದ ಗಾಯಾಳುಗಳ ಕುಟುಂಬಕ್ಕೆ ಯಶ್ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Share This Article