ಗರ್ಭಿಣಿ, ಬಾಣಂತಿಯರಿಗೆ ಲಸಿಕೆ ಅಭಿಯಾನ ವಿಸ್ತರಣೆ

Date:

ನಗರದಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದೆ. ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ನಗರದ 20 ಹೆರಿಗೆ ಆಸ್ಪತ್ರೆಗಳಲ್ಲಿಯೇ ಪಾಲಿಕೆ ವತಿಯಿಂದ ವಾರದಲ್ಲಿ ಮೂರು ದಿನಗಳ ಕಾಲ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ಲಸಿಕೆ ನೀಡಲು ಚಿಂತನೆ ನಡೆಸಲಾಗಿದೆ.

ಜುಲೈ 27 ರಿಂದ ಅಭಿಯಾನ ಆರಂಭವಾಗಿದ್ದು, ಅಂದಿನಿಂದ 3,701 ಗರ್ಭಿಣಿಯರು ಹಾಗೂ 830 ಮಂದಿ ಬಾಣಂತಿ ಮಹಿಳೆಯರು ನಗರದಲ್ಲಿ ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಮಹಿಳೆಯರಿಗೆ ಲಸಿಕೆ ನೀಡುವುದಕ್ಕೂ ಮುನ್ನ ಅವರೊಂದಿಗೆ ಸಮಾಲೋಜನೆ ಹಾಗೂ ತಪಾಸಣೆ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನ ಸಾಕಷ್ಟು ಸಮಯವನ್ನು ತೆಗೆದುಕೊಳ್ಲುತ್ತಿದೆ. ಗರ್ಭಿಣಿ ಮಹಿಳೆಯರನ್ನು ಹೆಚ್ಚು ಅಪಾಯಕ್ಕೆ ಸಿಲುಕಿರುವವರೆಂದು ಪರಿಶೀಲಿಸಲಾಗುತ್ತಿದ್ದು, ಹೀಗಾಗಿ ಪರಿಶೀಲನೆ ನಡೆಸಿದ ಬಳಿಕವೇ ಲಸಿಕೆ ನೀಡಲಾಗುತ್ತಿದೆ.

ಗರ್ಭಣಿಯರು ಹಾಗೂ ಹಾಲುಣಿಸುವ ತಾಯಿಯಂದಿರಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ಇತರೆ ರೋಗಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಒಂದು ವೇಳೆ ಅವರಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದೇ ಆದರೆ, ಲಸಿಕೆಯನ್ನು ತಡವಾಗಿ ನೀಡಲಾಗುತ್ತಿದೆ.

ಸಮಾಲೋಚನೆ ನಡೆಸುವ ಸಂದರ್ಭದಲ್ಲಿ ಲಸಿಕಾ ಅಭಿಯಾನ ಬಳಿಕ ಎದುರಾಗುವ ಪರಿಣಾಮಗಳ ಕುರಿತು ಮಾಹಿತಿ, ಸಲಹೆಗಳನ್ನು ನೀಡಲಾಗುತ್ತದೆ.

12 ಸಾರ್ವಜನಿಕ ಆರೋಗ್ಯ ಕೇಂದ್ರಗಳು, 6 ರೆಫರಲ್ ಆಸ್ಪತ್ರೆಗಳು, 3 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಯುಪಿಎಚ್‌ಸಿ) ), ಒಂದು ಸಮುದಾಯ ಆರೋಗ್ಯ ಕೇಂದ್ರ, ವಾಣಿ ವಿಲಾಸ ಆಸ್ಪತ್ರೆ ಮತ್ತು ಗೋಶಾ ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್‌ ಲಸಿಕೆ ನೀಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

 

ಅಭಿಯಾನ ಆರಂಭವಾದ ಮೊದಲ ವಾರದಲ್ಲಿ ಪ್ರತಿಕ್ರಿಯೆ ಅತ್ಯಂತ ಕಡಿಮೆ ಇತ್ತು. ಇದೀಗ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಲಸಿಕೆ ನೀಡಲೂ ಕೂಡ ಕೆಲವು ನಿಯಮಗಳನ್ನು ಅನುಸರಿಸಲಾಗುತ್ತಿದೆ. ಅರ್ಹ ಫಲಾನುಭವಿಗಳಿಗಷ್ಟೇ ಲಸಿಕೆ ನೀಡಲಾಗುತ್ತಿದೆ.

ಕೌಂಟರ್ ತೆರೆದು ಮಾಡಿ ಮಹಿಳೆಯರು ಕಾದು ನಿಲ್ಲುವಂತೆ ಮಾಡುತ್ತಿಲ್ಲ. ಫಲಾನುಭವಿಗಳಿರುವ ಸ್ಥಳಕ್ಕೆ ತೆರಳಿ, ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗಳಿಗೆ ಕರೆ ತಂದು ಲಸಿಕೆ ನೀಡುವ ಕೆಲಸ ಮಾಡುತ್ತಿದ್ದೇವೆ. ಹಿಂಜರಿಯುತ್ತಿದ್ದ ಬೆಳವಣಿಗೆಗಳು ಕಡಿಮೆಯಾಗಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಣದೀಪ್ ಅವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...