No menu items!
16.9 C
Munich
Monday, June 15, 2026

“ಗಾಂಧಿ ನಡಿ”ಗೆ ಮೂಲಕ ವಿಧಾನಸೌಧಕ್ಕೆ ಬಂದ ಸಿಎಂ, ಡಿಸಿಎಂ

Must read

“ಗಾಂಧಿ ನಡಿ”ಗೆ ಮೂಲಕ ವಿಧಾನಸೌಧಕ್ಕೆ ಬಂದ ಸಿಎಂ, ಡಿಸಿಎಂ

ಬೆಂಗಳೂರು: ಗಾಂಧಿ ಜಯಂತಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ “ಗಾಂಧಿ ನಡಿಗೆ” ಕಾರ್ಯಕ್ರಮ ನಡೆಸಿತು. ಸಿಎಂ ಮತ್ತು ಡಿಸಿಎಂ ಕಾಲ್ನಡಿಗೆಯಲ್ಲೇ ವಿಧಾನಸೌಧಕ್ಕೆ ತೆರಳಿದರು.
ಹೌದು ಗಾಂಧಿ ನಡಿಗೆ ಕಾರ್ಯಕ್ರಮ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದವರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವರಾದ ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ ಕಾಲ್ನಡಿಗೆಯಲ್ಲಿ ಸಾಗಿದರು. ಬಳಿಕ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ‘ಕಿತ್ತೂರು ವಿಜಯೋತ್ಸವದ ಜ್ಯೋತಿ’ಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಮುಖ್ಯಮಂತ್ರಿಗಳಿಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ರಿಜ್ವಾನ್ ಸೇರಿ ಹಲವರು ಸಾಥ್ ನೀಡಿದರು.

- Advertisement -spot_img

More articles

- Advertisement -spot_img

Latest article