ಗಾಳಿ ಮಳೆ ನಡುವೆಯೇ ಮೆಸ್ಕಾಂ ನೌಕರನ ಧೈರ್ಯ: ಕಂಬ ಏರಿ ದುರಸ್ತಿ ಕಾರ್ಯ!

Date:

ಗಾಳಿ ಮಳೆ ನಡುವೆಯೇ ಮೆಸ್ಕಾಂ ನೌಕರನ ಧೈರ್ಯ: ಕಂಬ ಏರಿ ದುರಸ್ತಿ ಕಾರ್ಯ!

ಕಳಸ: ಭಾರೀ ಗಾಳಿ ಮಳೆ ಮಧ್ಯೆಯೂ ಮೆಸ್ಕಾಂ ನೌಕರರೊಬ್ಬರು ಎತ್ತರದ ಕಂಬ ಹತ್ತಿ ವಿದ್ಯುತ್ ದುರಸ್ಥಿ ಕಾರ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಜರುಗಿದೆ.

ಕಳಸ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಕೈ ಕೊಟ್ಟಿತ್ತು. ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ಕಂಬಗಳಲ್ಲಿ ಸಮಸ್ಯೆ ಪದೇ ಪದೇ ತಲೆದೋರುವುದು ಸಾಮಾನ್ಯವಾಗಿದೆ. ವಿದ್ಯುತ್ ಇಲ್ಲದ ವಿಷಯ ಕರೆ ಮಾಡಿ ಮೆಸ್ಕಾಂ ಕಚೇರಿಗೆ ತಿಳಿಸಿದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ನೌಕರರೊಬ್ಬರು ಜೋರಾಗಿ ಸುರಿಯುವ ಮಳೆಯ ನಡುವೆಯೇ ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡಿದ್ದಾರೆ.‌ ಅಲ್ಯೂಮಿನಿಯಂ ಏಣಿ ಏರಿ ವಿದ್ಯುತ್ ದುರಸ್ತಿ ನಡೆಸಿದ್ದಾರೆ. ನೌಕರನ ಶಿಸ್ತಿನ ಕಾರ್ಯಕ್ಕೆ ಕಳಸ ಪಟ್ಟಣದ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...