ಗುಡುಗಿದ ಚಂದನ್ ಶೆಟ್ಟಿ..! ಕಾರಣ ಏನ್ ಗೊತ್ತಾ?

Date:

ಇತ್ತೀಚೆಗಷ್ಟೇ ಹೊಸ ಹಾಡು ರಿಲೀಸ್‌ ಮಾಡಿರುವ ಗಾಯಕ, ಸಂಗೀತ ನಿರ್ದೇಶಕ ಚಂದನ್‌ ಶೆಟ್ಟಿ ಅವರು ತಮ್ಮ ಸೋಶಿಯಲ್‌ ಮೀಡಿಯಾ ಖಾತೆ ಮೂಲಕ ಕೆಲವು ಪಬ್‌ಗಳ ಬಗ್ಗೆ ತಕರಾರು ತೆಗೆದಿದ್ದಾರೆ. ಬೆಂಗಳೂರಿನ ಪಬ್‌ಗಳಲ್ಲಿ ಕನ್ನಡ ಹಾಡನ್ನು ಹಾಕುವುದಿಲ್ಲ ಎಂದು ಅವರು ಗುಡುಗಿದ್ದಾರೆ. ತಾವು ಭೇಟಿ ನೀಡಿದ ಪಬ್‌ನಲ್ಲಿ ಯಾವ ರೀತಿಯ ಪರಿಸ್ಥಿತಿ ಇತ್ತು ಎಂಬುದನ್ನು ಅವರು ವಿವರಿಸಿದ್ದಾರೆ.
‘ನನಗೆ ಅರ್ಥ ಆಗತ್ತೆ ಸ್ವಾಮಿ. ಬೆಂಗಳೂರು ಒಂದು ಮೆಟ್ರೋಪಾಲಿಟನ್‌ ಸಿಟಿ. ಇಲ್ಲಿಗೆ ಬೇರೆ ಬೇರೆ ಭಾಷೆ, ರಾಜ್ಯ ಮತ್ತು ದೇಶದ ಜನರು ಬಂದಿದ್ದಾರೆ. ಎಲ್ಲ ಭಾಷೆಯ ಹಾಡುಗಳನ್ನು ಹಾಕಬೇಕು. ಕನ್ನಡವನ್ನೂ ಹಾಕಿ ಎಂದು ನಾವು ಮನವಿ ಮಾಡುತ್ತಿದ್ದೇವೆ. ಕನ್ನಡವನ್ನೇ ಹಾಕಬೇಕು ಅಂತ ನಾನೇನೂ ಹೇಳುತ್ತಿಲ್ಲವಲ್ಲ. ಕನ್ನಡ ಹಾಡು ಹಾಕಿದರೆ ನಿಮ್ಮ ವ್ಯಾಲ್ಯೂ ಕಡಿಮೆ ಆಗುತ್ತೆ ಎಂಬ ಮನಸ್ಥಿತಿಯಿಂದ ದಯವಿಟ್ಟು ಪಬ್‌ನ ಮ್ಯಾನೇಜ್‌ಮೆಂಟ್‌ನವರು ಹೊರಬನ್ನಿ. ನಮ್ಮಲ್ಲೂ ಮಿಲಿಯನ್‌ಗಟ್ಟಲೆ ಓಡಿದ ಹಾಡುಗಳಿವೆ. ಆಲ್‌ ಓಕೆ ಮುಂತಾದ ಒಳ್ಳೆಯ ಆರ್ಟಿಸ್ಟ್‌ಗಳ ಹಾಡುಗಳನ್ನು ಪ್ಲೇ ಮಾಡಿ. ಎಲ್ಲ ಕಲಾವಿದರ ಪರವಾಗಿ ನಾನು ಇದನ್ನು ಹೇಳುತ್ತಿದ್ದೇನೆ’ ಎಂಬುದು ಚಂದನ್‌ ಶೆಟ್ಟಿ ಮಾತುಗಳು.

Share post:

Subscribe

spot_imgspot_img

Popular

More like this
Related

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ...

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: ರಾಜ್ಯ...

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...