’ಗೂಢಚಾರಿ-2’ ಸಿನಿಮಾಗೆ ಬನಿತಾ ಸಂಧು ನಾಯಕಿ

Date:

ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಈ ಚಿತ್ರದ ಸೀಕ್ವೆಲ್ ಬರ್ತಿರೋದು ಗೊತ್ತೇ ಇದೆ. ಈಗಾಗಲೇ ರಿಲೀಸ್ ಆಗಿದ್ದ ‘ಗೂಢಚಾರಿ 2’ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ.

ಗೂಢಚಾರಿ-2 ಸಿನಿಮಾಗೆ ನಾಯಕಿ ಸಿಕ್ಕಿದ್ದಾರೆ. ಪ್ರತಿಭಾನ್ವಿತ ನಟಿ ಬನಿತಾ ಸಂಧು ಶೇಶ್ ಅಡಿವಿ ಶೇಷ್ ಗೆ ಜೋಡಿಯಾಗಿ ನಟಿಸುತ್ತಿದ್ದಾಳೆ. ಅಕ್ಟೋಬರ್, ಸರ್ದಾರ್ ಉದಾಮ್, ಆದಿತ್ಯ ವರ್ಮಾ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.


ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬನಿತಾ, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಉತ್ಸುಕಳಾಗಿದ್ದೇನೆ. ನಾನು ಹಿಂದೆಂದೂ ಮಾಡದಿರುವ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ನೋಡುತ್ತಾರೆ. ಈ ಚಿತ್ರದಲ್ಲಿ ಕೆಲಸ ಮಾಡಲು ನಾನು ಎಕ್ಸೈಟ್ ಆಗಿದ್ದೇನೆ ಎಂದಿದ್ದಾರೆ.

ಅಡಿವಿ ಶೇಷ್ ಮಾತನಾಡಿ, ಗೂಢಚಾರಿ ಪ್ರಪಂಚಕ್ಕೆ ಬಬಿತಾ ಅವರಿಗೆ ಸ್ವಾಗತ..ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

‘ಗೂಢಚಾರಿ 2’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದೆ. ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ 2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ...

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ ಕೋಲಾರ: ರಾಜ್ಯದಲ್ಲಿ...

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ: ಡಿ.ಕೆ.ಶಿವಕುಮಾರ್

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ:...

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...