ಗೃಹಜ್ಯೋತಿ ಯೋಜನೆಯಲ್ಲಿ ಬದಲಾವಣೆ: ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದೇನು..?

Date:

ಬೆಂಗಳೂರು: ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್‌ ನೀಡುವ ಮಾನದಂಡವನ್ನು 10 ಯೂನಿಟ್‌ ಆಗಿ ಬದಲಾಯಿಸಲು ಸಂಪುಟ ಸಮ್ಮತಿ ನೀಡಿದೆ. ಹೌದು ಈ ಬಗ್ಗೆ ನಗರದಲ್ಲಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಅವರು, 48 ಯುನಿಟ್‌ಗಿಂತ ಕಡಿಮೆ ಬಳಸಿದವರಿಗೆ ಶೇ.10 ಯುನಿಟ್ ಫ್ರೀ ವಿದ್ಯುತ್ ಕೊಡುತ್ತಿದ್ದೆವು. ಆದರೆ ಇದೀಗ ಶೇ.10 ಬದಲು 10 ಯುನಿಟ್‌ ನೀಡಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ ಎಂದು ಹೇಳಿದರು.
ಕೆಲವರು 48 ಯುನಿಟ್ ಕೊಟ್ಟರೂ ಕಡಿಮೆ ಬಳಕೆ ಮಾಡುತ್ತಿದ್ದರು. ಕೇವಲ 20-25 ಯುನಿಟ್ ಬಳಸಿದರೆ ಶೇ.2ರಷ್ಟು ಯುನಿಟ್ ನೀಡುತ್ತಿದ್ದೆವು. ಆದರೆ ಸಂಪುಟ ನಿರ್ಧಾರದಿಂದ 48 ಇರುವುದು 58 ಯುನಿಟ್‌ ಆಗುತ್ತದೆ. ಮುಂದಿನ ಬಿಲ್ಲಿಂಗ್‌ನಲ್ಲಿ ಇದು ಸೇರ್ಪಡೆಯಾಗುತ್ತದೆ ಎಂದು ಹೇಳಿದ್ದಾರೆ.
ಇದರಿಂದ ಸರ್ಕಾರಕ್ಕೆ ಹೊರೆ ಆಗುತ್ತೆ, ಆದರೆ ಬಡವರಿಗೆ ಅನುಕೂಲವಾಗುತ್ತೆ. ಎಷ್ಟೋ ಗ್ರಾಹಕರಿಗೆ ಶೂನ್ಯ ಬಿಲ್‌ ಬರುತ್ತಿರಲಿಲ್ಲ. ಇವರಿಗೆ ಅನುಕೂಲ ಆಗಲಿ ಅಂತಾ ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಂಡಿದ್ದಾರೆ. ಇದರಿಂದ ವಾರ್ಷಿಕವಾಗಿ 500-600 ಕೋಟಿ ರೂ. ಹೆಚ್ಚುವರಿ ಹೊರೆ ಆಗುತ್ತದೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...