ಗೆದ್ದ ಖುಷಿಯಲ್ಲಿದ್ದ ಟೀಮ್ ಇಂಡಿಯಾಕ್ಕೆ ಶಾಕ್

Date:

ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದ ಭಾರತ, ಪ್ರವಾಸಿ ಇಂಗ್ಲೆಂಡ್‌ ತಂಡವನ್ನು 164 ರನ್‌ಗಳಿಗೆ ನಿಯಂತ್ರಿಸಿತ್ತು. ಬಳಿಕ ಗುರಿ ಹಿಂಬಾಲಿಸಿದ ಟೀಮ್‌ ಇಂಡಿಯಾ 17.5 ಓವರ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗುರಿ ಮುಟ್ಟಿತು. ಆ ಮೂಲಕ 7 ವಿಕೆಟ್‌ಗಳಿಂದ ಸುಲಭ ಗೆಲುವು ಪಡೆದ ಕೊಹ್ಲಿ ಪಡೆ, ಟಿ20 ಸರಣಿಯಲ್ಲಿ 1-1 ಸಮಬಲ ಸಾಧಿಸಿತು.

“ತಾವು ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿದ್ದನ್ನು ನಾಯಕ ವಿರಾಟ್‌ ಕೊಹ್ಲಿ ಒಪ್ಪಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಔಪಚಾರಿಕ ವಿಚಾರಣೆ ಇರುವುದಿಲ್ಲ,” ಎಂದು ಹೇಳಿಕೆಯಲ್ಲಿ ಐಸಿಸಿ ಉಲ್ಲೇಖಿಸಿದೆ.

ಆನ್-ಫೀಲ್ಡ್ ಅಂಪೈರ್‌ಗಳಾದ ಅನಿಲ್ ಚೌಧರಿ ಮತ್ತು ಕೆ.ಎನ್. ಅನಂತಪದ್ಮನಾಭನ್ ಹಾಗೂ ಮೂರನೇ ಅಂಪೈರ್ ವೀರೇಂದ್ರ ಶರ್ಮಾ ಅವರು ನಿಧಾನಗತಿಯ ಬೌಲಿಂಗ್‌ ಆರೋಪವನ್ನು ಟೀಮ್‌ ಇಂಡಿಯಾ ಮೇಲೆ ಹೊರಿಸಿದ್ದರು. ಇನ್ನು ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದು ಬೀಗಿತ್ತು.

ಎರಡು ಪಂದ್ಯಗಳ ಅಂತ್ಯಕ್ಕೆ 5 ಪಂದ್ಯಗಳ ಟಿ20 ಸರಣಿಯಲ್ಲಿ 1-1 ಸಮಬಲ ಸಾಧಿಸಿರುವ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಮಾ.16 ರಂದು ಇದೇ ಅಂಗಣದಲ್ಲಿ ಮೂರನೇ ಹಣಾಹಣಿಯಲ್ಲಿ ಕಾದಾಟ ನಡೆಸಲಿವೆ.

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...