ಗೋಕಾಕ್ ನಲ್ಲಿ ‘ನಾಥೂರಾಮ್’..!!! ರಿಷಬ್ ಶೆಟ್ರು!

Date:

ನಿರ್ದೇಶಕ ರಿಷಬ್ ಶೆಟ್ಟಿ ‘ಬೆಲ್ ಬಾಟಂ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ನಟನೆಯತ್ತ ತಮ್ಮ ಗಮನ ಹರಿಸಿದ್ದಾರೆ. ಸದ್ಯ ಅವರು ‘ನಾಥೂರಾಮ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಸದ್ಯ ಈ ಚಿತ್ರದ ಶೂಟಿಂಗ್ ಗೋಕಾಕ್ ನಲ್ಲಿ ನಡೆಯುತ್ತಿದೆ.

‘ಬೆಲ್ ಬಾಟಂ’ ಚಿತ್ರದಲ್ಲಿ ರೆಟ್ರೋ ಲುಕ್ ನಲ್ಲಿ ಪಂಚಿಂಗ್ ಡೈಲಾಗ್ ಹೊಡೆದು ಅಭಿಮಾನಿಗಳು ಕುಣಿದು ಕೇಕೆ ಹಾಕುವಂತೆ ಮಾಡಿದ್ದ ಡಿಟೆಕ್ಟಿವ್ ದಿವಾಕರ ಇದೀಗ ‘ನಾಥೂರಾಮ್’ನ ಅವತಾರವೆತ್ತಿದ್ದಾರೆ.

ಅಂದ ಹಾಗೆ ಈ ಚಿತ್ರವನ್ನು ವಿನು ಬಳಂಜ ನಿರ್ದೇಶನ ಮಾಡುತ್ತಿದ್ದು, ಸದ್ಯ ಚಿತ್ರದ ಶೂಟಿಂಗ್ ಗೋಕಾಕ್ ನ ಹಳ್ಳಿಯ ಮನೆಯೊಂದರಲ್ಲಿ ನಡೆಯುತ್ತಿದೆ. ಈ ಚಿತ್ರದ ಮೂಲಕ ನಿರ್ದೇಶಕರು ವಿಭಿನ್ನವಾದ ಕಥೆಯನ್ನು ಹೇಳಲಿದ್ದಾರೆ.
ನಾಥೂರಾಮ್ ಎಂಬುದು ಕಥಾ ನಾಯಕನ ಹೆಸರು. ಆತ ಒಬ್ಬ ಕಾಲೇಜ್ ಲೆಕ್ಚರರ್. ಹಾಗೆಯೇ ಗಾಂಧೀಜಿಯವರ ಪರಮ ಭಕ್ತ, ಅಭಿಮಾನಿ, ಅನುಯಾಯಿ. ಆತನ ಸುತ್ತ ಕಥೆ ಸುತ್ತುತ್ತದೆ. ಹಾಗಂತಾ ನಾಥೂರಾಮ್ ಗೋಡ್ಸೆಗೂ, ಈ ಚಿತ್ರದ ಕಥಾ ನಾಯಕ ನಾಥೂರಾಮ್ ಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಚಿತ್ರತಂಡ ಈಗಾಗಲೇ ಸ್ಪಷ್ಟಪಡಿಸಿದೆ.

ಇನ್ನು ಚಿತ್ರಕ್ಕೆ ನಾಯಕಿಯಾಗಿ ‘ಮಗಳು ಜಾನಕಿ’ ಸೀರಿಯಲ್ ನ ಗಾನವಿ ಲಕ್ಷ್ಮಣ್ ಆಯ್ಕೆಯಾಗಿದ್ದು, ಉಳಿದಂತೆ ಅನಂತ್​ ನಾಗ್ , ಶಿವಮಣಿ, ಕಿಶೋರ್ , ಶಿವಮಣಿ, ಅಚ್ಯುತ್ ಕುಮಾರ್ ಸೇರಿದಂತೆ ಬಹುತೇಕ ತಾರೆಯರು ಬಣ್ಣಹಚ್ಚಿದ್ದು. ಹೆಚ್.ಕೆ ಪ್ರಕಾಶ್ ಬಂಡವಾಳ ಹೂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...