ಗೋಕಾಕ್ ನಲ್ಲಿ ‘ನಾಥೂರಾಮ್’..!!! ರಿಷಬ್ ಶೆಟ್ರು!

Date:

ನಿರ್ದೇಶಕ ರಿಷಬ್ ಶೆಟ್ಟಿ ‘ಬೆಲ್ ಬಾಟಂ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ನಟನೆಯತ್ತ ತಮ್ಮ ಗಮನ ಹರಿಸಿದ್ದಾರೆ. ಸದ್ಯ ಅವರು ‘ನಾಥೂರಾಮ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಸದ್ಯ ಈ ಚಿತ್ರದ ಶೂಟಿಂಗ್ ಗೋಕಾಕ್ ನಲ್ಲಿ ನಡೆಯುತ್ತಿದೆ.

‘ಬೆಲ್ ಬಾಟಂ’ ಚಿತ್ರದಲ್ಲಿ ರೆಟ್ರೋ ಲುಕ್ ನಲ್ಲಿ ಪಂಚಿಂಗ್ ಡೈಲಾಗ್ ಹೊಡೆದು ಅಭಿಮಾನಿಗಳು ಕುಣಿದು ಕೇಕೆ ಹಾಕುವಂತೆ ಮಾಡಿದ್ದ ಡಿಟೆಕ್ಟಿವ್ ದಿವಾಕರ ಇದೀಗ ‘ನಾಥೂರಾಮ್’ನ ಅವತಾರವೆತ್ತಿದ್ದಾರೆ.

ಅಂದ ಹಾಗೆ ಈ ಚಿತ್ರವನ್ನು ವಿನು ಬಳಂಜ ನಿರ್ದೇಶನ ಮಾಡುತ್ತಿದ್ದು, ಸದ್ಯ ಚಿತ್ರದ ಶೂಟಿಂಗ್ ಗೋಕಾಕ್ ನ ಹಳ್ಳಿಯ ಮನೆಯೊಂದರಲ್ಲಿ ನಡೆಯುತ್ತಿದೆ. ಈ ಚಿತ್ರದ ಮೂಲಕ ನಿರ್ದೇಶಕರು ವಿಭಿನ್ನವಾದ ಕಥೆಯನ್ನು ಹೇಳಲಿದ್ದಾರೆ.
ನಾಥೂರಾಮ್ ಎಂಬುದು ಕಥಾ ನಾಯಕನ ಹೆಸರು. ಆತ ಒಬ್ಬ ಕಾಲೇಜ್ ಲೆಕ್ಚರರ್. ಹಾಗೆಯೇ ಗಾಂಧೀಜಿಯವರ ಪರಮ ಭಕ್ತ, ಅಭಿಮಾನಿ, ಅನುಯಾಯಿ. ಆತನ ಸುತ್ತ ಕಥೆ ಸುತ್ತುತ್ತದೆ. ಹಾಗಂತಾ ನಾಥೂರಾಮ್ ಗೋಡ್ಸೆಗೂ, ಈ ಚಿತ್ರದ ಕಥಾ ನಾಯಕ ನಾಥೂರಾಮ್ ಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಚಿತ್ರತಂಡ ಈಗಾಗಲೇ ಸ್ಪಷ್ಟಪಡಿಸಿದೆ.

ಇನ್ನು ಚಿತ್ರಕ್ಕೆ ನಾಯಕಿಯಾಗಿ ‘ಮಗಳು ಜಾನಕಿ’ ಸೀರಿಯಲ್ ನ ಗಾನವಿ ಲಕ್ಷ್ಮಣ್ ಆಯ್ಕೆಯಾಗಿದ್ದು, ಉಳಿದಂತೆ ಅನಂತ್​ ನಾಗ್ , ಶಿವಮಣಿ, ಕಿಶೋರ್ , ಶಿವಮಣಿ, ಅಚ್ಯುತ್ ಕುಮಾರ್ ಸೇರಿದಂತೆ ಬಹುತೇಕ ತಾರೆಯರು ಬಣ್ಣಹಚ್ಚಿದ್ದು. ಹೆಚ್.ಕೆ ಪ್ರಕಾಶ್ ಬಂಡವಾಳ ಹೂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...