ಗೋಡೆ ಒಡೆದು ಜೈಲಿನಿಂದ 200ಕ್ಕೂ ಹೆಚ್ಚು ಖೈದಿಗಳು ಎಸ್ಕೇಪ್… ನಾಗರೀಕರಿಗೆ ವಿಶೇಷ ಸಂದೇಶ!

Date:

ಗೋಡೆ ಒಡೆದು ಜೈಲಿನಿಂದ 200ಕ್ಕೂ ಹೆಚ್ಚು ಖೈದಿಗಳು ಎಸ್ಕೇಪ್… ನಾಗರೀಕರಿಗೆ ವಿಶೇಷ ಸಂದೇಶ!

ಇಸ್ಲಾಮಾಬಾದ್:- ಗೋಡೆ ಒಡೆದು ಜೈಲಿನಿಂದ 200ಕ್ಕೂ ಹೆಚ್ಚು ಖೈದಿಗಳು ಎಸ್ಕೇಪ್ ಆಗಿರುವ ಘಟನೆ ಕರಾಚಿಯ ಜಿಲ್ಲಾ ಕಾರಾಗೃಹದಲ್ಲಿ ಜರುಗಿದೆ. ನಗರದಲ್ಲಿ ಸರಣಿ ಕಂಪನಗಳಿಂದ ಉಂಟಾದ ಅವ್ಯವಸ್ಥೆಯ ಮಧ್ಯೆ ಈ ತಪ್ಪಿಸಿಕೊಳ್ಳುವಿಕೆ ಸಂಭವಿಸಿದೆ ಎಂದಿದ್ದಾರೆ. ಹೀಗೆ ಜೈಲಿನಿಂದ ತಪ್ಪಿಸಿಕೊಂಡ ಖೈದಿಗಳಲ್ಲಿ 20ಕ್ಕೂ ಹೆಚ್ಚು ಮಂದಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಆದರೆ ಉಳಿದವರನ್ನು ತಕ್ಷಣವೇ ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.

ನಾಗರಿಕರು ಖೈದಿಗಳಿಗೆ ಯಾರು ಆಶ್ರಯ ನೀಡಬಾರದು, ಯಾರು ಮನೆಯಿಂದ ಹೊರಬಾರದಂತೆ ಜನರಿಗೆ ಪೋಲಿಸರು ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ವರದಿ ಮಾಡಬೇಕು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಜೈಲಿನ ಡಿಐಜಿ ಹಸನ್ ಸಾಹೇತು ಮತ್ತು ಸಿಂಧ್ ರೇಂಜರ್ಸ್ ಮಹಾನಿರ್ದೇಶಕ ಮೇಜರ್ ಜನರಲ್ ಮುಹಮ್ಮದ್ ಶಮ್ರೇಜ್ ಕೂಡ ಜೈಲಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಪ್ರಾಥಮಿಕ ತನಿಖೆಯಲ್ಲಿ ಜೈಲು ನಿರ್ವಹಣೆ ಮತ್ತು ಆಂತರಿಕ ಭದ್ರತೆಯಲ್ಲಿ ಗಂಭೀರ ಲೋಪಗಳು ಕಂಡುಬಂದಿವೆ.

Share post:

Subscribe

spot_imgspot_img

Popular

More like this
Related

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...