ಗ್ರಾಮ ವಾಸ್ತವ್ಯದಲ್ಲಿ ಕುಮಾರಣ್ಣ ಏನೆಲ್ಲಾ ಮಾಡಲಿದ್ದಾರೆ ಗೊತ್ತಾ..?

Date:

ಎಲ್ಲೆಡೆ ಚರ್ಚೆಗೆ ಕಾರಣವಾಗಿರುವ ಹಾಗೂ ವಿರೋಧ ಪಕ್ಷದವರ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪುನಃ ಆರಂಭವಾಗಲಿದೆ.

ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಾದಗಿರಿ ಜಿಲ್ಲೆಯಿಂದ ಆರಂಭವಾಗಲಿದ್ದು ಜೂನ್ 21ರಂದು ಅವರು ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂತಿಮ ಪಟ್ಟಿಯನ್ನು ಯಾದಗಿರಿ ಜಿಲ್ಲಾಡಳಿತ ಬಿಡುಗಡೆಗೊಳಿಸಿದೆ.
ಜೂ.21ರಂದು ಬೆಳಗ್ಗೆ 3.48ಕ್ಕೆ ಬೆಂಗಳೂರಿನಿಂದ ಹೊರಡುವ ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಯಾದಗಿರಿಗೆ ಕುಮಾರಸ್ವಾಮಿ ಆಗಮಿಸಲಿದ್ದು ಸಂಜೆ 6.30ರಿಂದ ರಾತ್ರಿ 8.30ರ ತನಕ ರೈತರೊಂದಿಗೆ ಸಂವಾದ ನಡೆಸಿ ಮಕ್ಕಳ ಸಾಂಸ್ಕೃತಿ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಿ ನಂತರ ಮಕ್ಕಳೊಂದಿಗೆ ಭೋಜನವನ್ನು ಸವಿದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಮರುದಿನ ಅಂದರೆ ಜೂನ್ 22ರಂದು ಬೆಳಗ್ಗೆ 7.30 ಕ್ಕೆ ಚಂಡರಕಿ ಗ್ರಾಮದಿಂದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೆರೂರು-ಬಿ ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

 

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...