ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಅಂಗಡಿಯಲ್ಲಿ ಕಳ್ಳತನ – ಆರೋಪಿಗಳು ಅರೆಸ್ಟ್!

0
30

ಬೆಂಗಳೂರು:- ಚಿನ್ನದ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳರು ತಮ್ಮ ಕೈಳಕ ತೋರಿರುವ ಘಟನೆ ಹೊಸಕೆರೆಹಳ್ಳಿಯ ಕೃಷ್ಣ ಬ್ಯಾಂಕರ್ಸ್ ಮತ್ತು ಜ್ಯೂವೆಲ್ಲರ್ಸ್ ನಲ್ಲಿ ಜರುಗಿದೆ.

ಮಾಲೀಕನ ಗಮನ ಬೇರೆಡೆ ಸೆಳೆದು 60 ಗ್ರಾಂ‌ ಚಿನ್ನದ ಉಂಗುರ ಕಳ್ಳತನ ಮಾಡಿದ್ದು, ಮಾರ್ಚ್ 4 ರಂದು ಸಂಜೆ 4.40 ಕ್ಕೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಿನ್ನ ಖರೀದಿಸುವ ನೆಪದಲ್ಲಿ ಮುಬಾರಕ್, ಅಸ್ಗರ್ ಬಂದಿದ್ದರು. ಈ ವೇಳೆ ಸಿಬ್ಬಂದಿಗೆ ಬೇರೆ ಬೇರೆ ಡಿಸೈನ್ ಉಂಗುರ ತೋರಿಸುವಂತೆ ಹೇಳಿದ್ದಾರೆ. ಈ ವೇಳೆ ಮಾಲೀಕನ ಗಮನ ಬೇರೆಡೆ ಸೆಳೆದು ಉಂಗುರ ಕಳ್ಳತನ ಮಾಡಿದ್ದಾರೆ.

ಕಳ್ಳತನ ಮಾಡಿ ತಮಿಳುನಾಡಿನತ್ತ ಆರೋಪಿಗಳು ಹೊರಟಿದ್ದಾರೆ ದೂರು ಆಧರಿಸಿ ಗಿರಿನಗರ ಪೊಲೀಸರು ಆರೋಪಿಗಳನ್ನ ಬಂಧಿಸಲು ತಮಿಳುನಾಡಿಗೆ ತೆರಳಿದ್ದರು.

ಈ ವೇಳೆ ಪೊಲೀಸರ ಕಾರಿನ ಮೇಲೆ ಅಟ್ಯಾಕ್ ಮಾಡಿ ತಪ್ಪುಸಿಕೊಳ್ಳಲು ಆರೋಪಿಗಳು ಯತ್ನಿಸಿದ್ದಾರೆ. ಕೊನೆಗೂ ಆರೋಪಿಗಳನ್ನು ಬಂಧಿಸಿ ಪೊಲೀಸರು ಕರೆರಂದಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.