ಚಾಕುವಿನಿಂದ ಇರಿದು ಸರ್ಕಾರಿ ಅಧಿಕಾರಿ ಹತ್ಯೆ..!

Date:

ಬೆಂಗಳೂರು: ಚಾಕು ಇರಿದು ಉಪ ನಿರ್ದೇಶಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ. ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಮೃತ ಸರ್ಕಾರಿ ಅಧಿಕಾರಿ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ ರಾತ್ರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.


ಭಾನುವಾರ ಬೆಳಗ್ಗೆ ಪ್ರತಿಮಾ ಅವರ ಸಹೋದರ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆ ಬಳಿ ತೆರಳಿದಾಗ ಕೊಲೆಯಾದ ವಿಚಾರ ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ಪ್ರತಿಮಾ ಅವರನ್ನು ಕಾರು ಚಾಲಕ ನಿವಾಸಕ್ಕೆ ತಂದು ಬಿಟ್ಟಿದ್ದಾನೆ. ಪ್ರತಿಮಾ ಬೆಂಗಳೂರಿನಲ್ಲಿ ಒಬ್ಬರೇ ವಾಸವಾಗಿದ್ದು, ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದಾರೆ. ಪ್ರತಿಮಾ ಅವರ ಜೊತೆ ಮನೆಯಲ್ಲಿ ನಿನ್ನೆ ಯಾರಿದ್ದರು? ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಈ ವಿಚಾರಗಳು ಇನ್ನಷ್ಟೇ ತಿಳಿಯಬೇಕಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...