ಚಾಮರಾಜನಗರ ಆಕ್ಸಿಜನ್ ದುರಂತ ; ಡಿಸಿಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಹೇಳಿದ್ದೇನು?

admin
1 Min Read

ಚಾಮರಾಜನಗರ: ಆಕ್ಸಿಜನ್ ಖಾಲಿಯಾಗಿ ಚಾಮರಾಜನಗರ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗೆ ಕರೆ ಮಾಡಿದ ಬಿಎಸ್‌ವೈ ದುರಂತ ಹಾಗೂ ಅದಕ್ಕೆ ಕಾರಣ ಕುರಿತಾಗಿ ವಿವರಗಳನ್ನು ಪಡೆದುಕೊಂಡರು.


ಚಾಮರಾಜನಗರ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ ರಾತ್ರಿ ಆಕ್ಸಿಜನ್‌ ಖಾಲಿ ಆದ ಕಾರಣದಿಂದಾಗಿ 23 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ ಈ ದುರ್ಘಟನೆ ನಡೆದಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯರಾತ್ರಿ ಆಕ್ಸಿಜನ್‌ ಖಾಲಿಯಾಗಿದ್ದು, ಈ ಹಿನ್ನೆಲೆ ವೆಂಟಿಲೇಟರ್‌ನಲ್ಲಿದ್ದ ಹನ್ನೆರಡು ಜನ ಕೊರೊನಾ ರೋಗಿಗಳು ಮೃತಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ಆರು ಸಾವಿರ ಲೀಟರ್‌ ಆಕ್ಸಿಜನ್‌ ಘಟಕ ಸ್ಥಾಪನೆಯಾಗಿದೆಯಾದರೂ ಅದಕ್ಕೆ ಆಕ್ಸಿಜನ್‌ ಪೂರೈಕೆ ಆಗಿರಲಿಲ್ಲ. ಭಾನುವಾರ ಮಧ್ಯರಾತ್ರಿ ಅದರಲ್ಲಿದ್ದ ಆಕ್ಸಿಜನ್‌ ಮುಗಿದಿದೆ. ಹೀಗಾಗಿ ವೆಂಟಿಲೇಟರ್‌ನಲ್ಲಿದ್ದ ಹನ್ನೆರಡು ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Share This Article
Leave a Comment