No menu items!
12.4 C
Munich
Wednesday, April 29, 2026

ಚಾರ್ಮಾಡಿ ಘಾಟ್ ಸಂಚಾರಿಗಳಿಗೆ ಗುಡ್ ನ್ಯೂಸ್

Must read

ಕಳೆದ ಒಂದು ತಿಂಗಳಿನಿಂದ ವಾಹನ ಸಂಚಾರ ಸ್ಥಗಿತವಾಗಿದ್ದ ಶಿರಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ಆರಂಭವಾಗಿದೆ. ಜುಲೈನಲ್ಲಿ ಸುರಿದ ಭಾರೀ ಮಳೆಗೆ ಶಿರಾಡಿ ಘಾಟ್‌ನ ದೋಣಿಗಲ್ ಎಂಬಲ್ಲಿ ಹೆದ್ದಾರಿ ಕುಸಿತವಾಗಿದ್ದು, ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧವಾಗಿತ್ತು. ಇದೀಗ ಹೆದ್ದಾರಿ ದುರಸ್ಥಿ ಕಾರ್ಯ ನಡೆದಿದ್ದು, ಕೆಲ ನಿಯಮಗಳ ಅನುಸಾರವಾಗಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಆಗಸ್ಟ್ 16ರಿಂದ ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರಮುಖವಾಗಿ ‌ಕಾರು, ಜೀಪು, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಆ್ಯಂಬುಲೆನ್ಸ್ ಮತ್ತು ಬಸ್‌ಗಳು ಮತ್ತು 20 ಟನ್ ಸಾಮರ್ಥ್ಯದ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್‌ನಲ್ಲಿ ಅವಕಾಶ ಮಾಡಿಕೊಡಲಾಗಿದೆ.

 

ಆದರೆ ಬುಲೆಟ್ ಟ್ಯಾಂಕರ್, ಕಂಟೇನರ್ ಲಾರಿ ಸೇರಿದಂತೆ ಬೃಹತ್ ವಾಹನಗಳಿಗೆ ಸಂಚಾರಕ್ಕೆ ಇನ್ನೂ ಅವಕಾಶವನ್ನು ನೀಡಿಲ್ಲ. ರಸ್ತೆ ಸಂಚಾರ ಆರಂಭಕ್ಕೂ ಮುನ್ನ ಶಾಸಕರು, ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಪ್ರತೀಕ್ ಬಯಾಲ್, ಜಿಲ್ಲಾಧಿಕಾರಿ ಆರ್. ಗಿರೀಶ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

 

ಅಧಿಕಾರಿಗಳ ಪರಿಶೀಲನೆ ಬಳಿಕ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ರಾತ್ರಿಯೇ ಆಗಸ್ಟ್ 16 ಬೆಳಗ್ಗಿನಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಆರಂಭ ಅಂತಾ ಸುದ್ದಿ ಹಬ್ಬಿದ್ದರಿಂದ ಬೆಳಗ್ಗಿನಿಂದಲೇ ದೋಣಿಗಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಟ್ರಾಫಿಕ್ ಜಾಮ್ ಉಂಟಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article