ಚಿಕಿತ್ಸೆ ಕೊಡಿಸ್ತೇನೆ ಅಂತ ತಾಯಿಯನ್ನು ಯಾರೂ ಇಲ್ಲದ ಕಡೆ ಬಿಟ್ಟುಹೋದ ಮಗಳು

Date:

ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಮನೆಯಿಂದ ತನ್ನ ಶತಾಯುಷಿ ತಾಯಿಯನ್ನು ಕರೆ ತಂದ ಮಗಳೊಬ್ಬಳು; ಇಲ್ಲಿಗೆ ಸಮೀಪದ ಅಂತರಸಂತೆ ಬಳಿಯ ನಿರ್ಜನ ಪ್ರದೇಶದ ರಸ್ತೆ ಬದಿಯೇ ಬಿಟ್ಟು ಹೋದ ಅಮಾನವೀಯ ಘಟನೆ ಬುಧವಾರ ನಡೆದಿದೆ.

 

ವೃದ್ಧೆಗೆ ಮನೆಯ ವಿಳಾಸ ನೆನಪಿಲ್ಲ. ನನ್ನೂರು ಮೈಸೂರು. ಅಳಿಯ-ಮಗಳು ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದರು. ನನ್ನನ್ನು ಕರೆದೊಯ್ಯಲು ಬರುತ್ತಾರೆ ಎಂದೇ ಹೇಳುತ್ತಿದ್ದಾರೆ.

ಬುಧವಾರ ಮಧ್ಯಾಹ್ನದಿಂದಲೂ ಅಳಿಯ-ಮಗನ ಬರುವಿಕೆಯಲ್ಲೇ ಕಾದಿದ್ದ ವೃದ್ಧೆಗೆ ಸ್ಥಳೀಯರು ನೆರವಾಗಿದ್ದಾರೆ. ಅಂತರಸಂತೆಯ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ.

ಊಟ ಮಾಡಲಾಗದ ಸ್ಥಿತಿ ತಲುಪಿದ್ದ ವೃದ್ಧೆ, ಆಟೊ ಮೂಲಕ ಮನೆಗೆ ಕಳುಹಿಸಿಕೊಡಿ ಎಂದು ನೆರೆದಿದ್ದವರನ್ನು ಕೋರಿದ ದೃಶ್ಯ ಮನಕಲುಕಿತು. ಪೊಲೀಸರು ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.

‘ವಿಷಯ ತಿಳಿದೊಡನೆ ಶತಾಯುಷಿಯನ್ನು ಕೆ.ಆರ್.ನಗರದ ಮಾತೃಶ್ರೀ ವೃದ್ದಾಶ್ರಮಕ್ಕೆ ದಾಖಲಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆಶಾ ‘ಪ್ರಜಾವಾಣಿ’ಗೆ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...