ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಮುಳುಗಿ 3 ಮಕ್ಕಳು ದುರ್ಮರಣ!

Date:

ಚಿಕ್ಕೋಡಿ:- ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು.

ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಮೂವರು ಬಾಲಕರು ಮನೆಗೆ ಬಾರದಿದ್ದಾಗ ಪೋಷಕರಿಂದ ಹುಡುಕಾಟ ಆರಂಭಿಸಿದ್ದಾರೆ. ಕೃಷಿಹೊಂಡದಲ್ಲಿ ಬಿದ್ದ ಸಾವನ್ನಪ್ಪಿರುವ ವಿಚಾರವಾಗಿ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ರವಾನಿಸುವ ಕಾರ್ಯವನ್ನ ಪೊಲೀಸರು ಮಾಡಿದ್ದಾರೆ.

ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...