ಕೋಟೆ ನಾಡು ಚಿತ್ರದುರ್ಗಕೆ ದರ್ಶನ್ ಆಗಮನ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಗಂಡುಗಲಿ ಮದಕರಿ ನಾಯಕ ಸಿನಿಮಾದ ಮುಹೂರ್ತ ಇಂದು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು , ಈ ಹಿನ್ನೆಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಚಿತ್ರತಂಡದವರು ಕೋಟೆನಾಡಿಗೆ ಆಗಮಿಸಿದ್ದಾರೆ. ಡಿಬಾಸ್ ನೋಡಲು ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದರು ಎಂದು ಹೇಳಲಾಗುತ್ತಿದೆ .
ದರ್ಶನ್ ಸೇರಿದಂತೆ ಚಿತ್ರತಂಡ ಚಿತ್ರದುರ್ಗದ ನೀಲಕಂಠೇಶ್ವರ, ಬರಗೇರಮ್ಮ, ಉಚ್ಚಂಗಿ ಯಲ್ಲಮ್ಮ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದರ್ಶನ್ಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಸಾಹಿತಿ ಬಿ.ಎಲ್ ವೇಣು ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಮತ್ತಿತರರು ಸಾಥ್ ನೀಡಿದ್ದಾರೆ.
ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.