ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

Date:

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ₹2 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ನೆರವು ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಎಕ್ಸ್‌ (ಹಿಂದಿನ ಟ್ವಿಟರ್‌) ಮೂಲಕ ಮಾಹಿತಿ ಹಂಚಿಕೊಂಡಿದೆ.
“ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ, ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ. ಶಿವಕುಮಾರ್ ಮನವಿ

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ....