ಚಿತ್ರಪ್ರೇಮಿಗಳೇ ಗುಡ್ ನ್ಯೂಸ್

Date:

ಕರ್ನಾಟಕದಲ್ಲಿ ಕೋವಿಡ್ ಎರಡನೇ ಅಲೆಯ ಅಬ್ಬರ ತಗ್ಗಿದ್ದು, ಸೋಂಕಿತ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಾಣುತ್ತಿವೆ. ಈ ಹಿನ್ನೆಲೆಯಲ್ಲಿ ನಾಲ್ಕನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದರು. ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡರು.
ಜುಲೈ 19 ರಿಂದ ಅನ್ವಯವಾಗುವಂತೆ ಕಳೆದ ಮೂರು ತಿಂಗಳಿನಿಂದ ಬಂದ್ ಆಗಿದ್ದ ಚಿತ್ರಮಂದಿರಗಳನ್ನು ತೆರೆಯಲು ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ ಇದಕ್ಕೂ ಕೆಲವು ನಿರ್ಬಂಧ ವಿಧಿಸಿರುವ ಸರ್ಕಾರ, ಶೇಕಡ 50 ರಷ್ಟು ಪ್ರೇಕ್ಷಕರ ಭರ್ತಿಗೆ ಮಾತ್ರ ಅವಕಾಶ ಕಲ್ಪಿಸಿದೆ.
ಇದರ ಅನ್ವಯ ಜುಲೈ 19 ರಿಂದ ರಾಜ್ಯದಾದ್ಯಂತ ಸಿನಿಮಾ ಥಿಯೇಟರ್‌ಗಳು ಓಪನ್ ಆಗಲಿವೆ. ಚಿತ್ರಮಂದಿರಗಳಲ್ಲಿ 50% ಆಸನ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಥಿಯೇಟರ್ ಜೊತೆಗೆ ರಂಗಮಂದಿರಗಳನ್ನೂ 50% ಆಸನ ಭರ್ತಿಯೊಂದಿಗೆ ತೆರೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಿತ್ರರಂಗ ಮತ್ತು ರಂಗಭೂಮಿ ಕೊಂಚ ಚೇತರಿಕೆ ಕಾಣಲಿದೆ.


ಮತ್ತೊಂದುಕಡೆ ನೈಟ್ ಕರ್ಫ್ಯೂ ಅವಧಿಯನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...