ಚಿತ್ರ ನಿರ್ಮಾಪಕ, ವಿತರಕ ಕಪಾಲಿ ಮೋಹನ್ ಆತ್ಮಹತ್ಯೆ

Date:

ಬೆಂಗಳೂರು : ಚಿತ್ರ ನಿರ್ಮಾಪಕ, ವಿತರಕರ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಪೀಣ್ಯ ಬಸವೇಶ್ವರ ಬಸ್​ ಟರ್ಮಿನಲ್​​ ಸಮೀಪವಿರುವ ತಮ್ಮ ಸುಪ್ರೀಂ ಹೋಟೆಲ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಹೋಟೆಲ್​ಗೆ ತೆರಳಿದ್ದ ಅವರು, ಅಲ್ಲಿಯೇ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಹೋಟೆಲ್ ಸಿಬ್ಬಂದಿ ಅವರನ್ನು ಎಬ್ಬಿಸಲು ಬಾಗಿಲು ತಟ್ಟಿದಾಗ ಅವರು ಬಾಗಿಲು ತೆಗೆದಿಲ್ಲ. ಆ ವೇಳೆ ಸಹಜವಾಗಿ ಅನುಮಾನಗೊಂಡು ಕಿಟಕಿ ಒಡೆದು ನೋಡಿದಾಗ ಮೋಹನ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಡಾ. ರಾಜ್​ಕುಮಾರ್ ಕುಟುಂಬಕ್ಕೆ ಬಹಳ ಹತ್ತಿರದವರಾಗಿದ್ದ ಮೋಹನ್ ಸಿನಿಮಾ ನಿರ್ಮಾಣ, ವಿತರಣೆಯಲ್ಲಿ ತೊಡಗಿಕೊಂಡಿದ್ದರು. ಹೋಟೆಲ್ ಉದ್ಯಮವನ್ನೂ ನಡೆಸುತ್ತಿದ್ದರು. ಈ ಹಿಂದೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇವರು ಮೂಲತಃ ಉಡುಪಿ ಕುಂದಾಪುರದ ವಕ್ವಾಡಿಯವರಾಗಿದ್ದು, ಕೆಲವು ವರ್ಷಗಳಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share post:

Subscribe

spot_imgspot_img

Popular

More like this
Related

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...