ಚಿತ್ರ ನಿರ್ಮಾಪಕ, ವಿತರಕ ಕಪಾಲಿ ಮೋಹನ್ ಆತ್ಮಹತ್ಯೆ

admin
1 Min Read

ಬೆಂಗಳೂರು : ಚಿತ್ರ ನಿರ್ಮಾಪಕ, ವಿತರಕರ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಪೀಣ್ಯ ಬಸವೇಶ್ವರ ಬಸ್​ ಟರ್ಮಿನಲ್​​ ಸಮೀಪವಿರುವ ತಮ್ಮ ಸುಪ್ರೀಂ ಹೋಟೆಲ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಹೋಟೆಲ್​ಗೆ ತೆರಳಿದ್ದ ಅವರು, ಅಲ್ಲಿಯೇ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಹೋಟೆಲ್ ಸಿಬ್ಬಂದಿ ಅವರನ್ನು ಎಬ್ಬಿಸಲು ಬಾಗಿಲು ತಟ್ಟಿದಾಗ ಅವರು ಬಾಗಿಲು ತೆಗೆದಿಲ್ಲ. ಆ ವೇಳೆ ಸಹಜವಾಗಿ ಅನುಮಾನಗೊಂಡು ಕಿಟಕಿ ಒಡೆದು ನೋಡಿದಾಗ ಮೋಹನ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಡಾ. ರಾಜ್​ಕುಮಾರ್ ಕುಟುಂಬಕ್ಕೆ ಬಹಳ ಹತ್ತಿರದವರಾಗಿದ್ದ ಮೋಹನ್ ಸಿನಿಮಾ ನಿರ್ಮಾಣ, ವಿತರಣೆಯಲ್ಲಿ ತೊಡಗಿಕೊಂಡಿದ್ದರು. ಹೋಟೆಲ್ ಉದ್ಯಮವನ್ನೂ ನಡೆಸುತ್ತಿದ್ದರು. ಈ ಹಿಂದೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇವರು ಮೂಲತಃ ಉಡುಪಿ ಕುಂದಾಪುರದ ವಕ್ವಾಡಿಯವರಾಗಿದ್ದು, ಕೆಲವು ವರ್ಷಗಳಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share This Article
Leave a Comment