ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಇತ್ತೀಚೆಗೆ RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಗಿರೀಶ್ ಕುಮಾರ್ ಎಂಬುವವರು ಸುದೀರ್ಘ ಪತ್ರದೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಐಪಿಎಲ್-ಆರ್ಸಿಬಿ ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ. ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ವಹಿಸಿದ ಕಾರಣ ಅಮಾಯಕರ ಸಾವು-ನೋವಾಗಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದಾರೆ.