No menu items!
11.1 C
Munich
Wednesday, April 29, 2026

ಚಿಪ್ಕೋ ಚಳುವಳಿ ನಾಯಕ ಸುಂದರ್ ಲಾಲ್ ಬಹುಗುಣ ಕೊರೊನಾದಿಂದ ಮರಣ

Must read

ಡೆಹ್ರಾಡೂನ್: ಚಿಪ್ಕೋ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಅವರು ಇಂದು ಉತ್ತರಾಖಂಡದ ರಿಷಿಕೇಶ್ ನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಸುಂದರ್ ಲಾಲ್ ಬಹುಗುಣ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಅವರನ್ನು ರಿಷಿಕೇಶ್‍ನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ತನ್ನ ಜೀವಮಾನವಿಡಿ ಪರಿಸರವಾದಿಯಾಗಿ ಗುರಿತಿಸಿಕೊಂಡಿದ್ದ ಸುಂದರ್‍ಲಾಲ್ ಬಹುಗುಣ ಅವರು ಚಿಪ್ಕೋ ಚಳುವಳಿ ಮೂಲಕ ಮರಗಳನ್ನು ಕಡಿಯದಂತೆ ಆಂದೋಲನವನ್ನು ಪ್ರಾರಂಭಿಸಿದ್ದರು. ಬಳಿಕ 1990ರಲ್ಲಿ ತೇರಿ ಡ್ಯಾಮ್ ಆಂದೋಲನ ಪ್ರಾರಂಭಿಸಿದ್ದರು ಇದರ ಭಾಗವಾಗಿ 1995ರಲ್ಲಿ ಜೈಲುವಾಸ ಕೂಡ ಅನುಭವಿಸಿದ್ದರು. ಇವರ ಪರಿಸರ ಆಂದೋಲನವನ್ನು ಗುರುತಿಸಿ ಭಾರತ ಸರ್ಕಾರ ಇವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article